AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರವನ್ನು ಒಡನಾಡಿ ಸಂಸ್ಥೆ ರೂಪಿಸಿದೆ: ಮುರುಘಾ ಮಠ ಸಲಹಾ ಸಮಿತಿ ಸದಸ್ಯ

ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರವನ್ನು ಒಡನಾಡಿ ಸಂಸ್ಥೆ ರೂಪಿಸಿದೆ: ಮುರುಘಾ ಮಠ ಸಲಹಾ ಸಮಿತಿ ಸದಸ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Sep 06, 2022 | 2:22 PM

ಮಂಗಳವಾರ ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿದ ಅವರು ಕನ್ನಡ ಚಿತ್ರರಂಗದ ಖ್ಯಾತ ನಟ ಸಾಧು ಕೋಕಿಲ ಮತ್ತು ರಮೇಶ್ ಹೆಸರಿನ ಮಂಡ್ಯ ಮೂಲದ ಉದ್ಯಮಿ ಒಡನಾಡಿ ಸಂಸ್ಥೆಯ ವಿರುದ್ಧ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ ಎಂದು ಹೇಳಿದರು.

ಚಿತ್ರದುರ್ಗ: ಮುರುಘಾ ಮಠದ ಸಲಹಾ ಸಮಿತಿ ಸದಸ್ಯ ಜಿತೇಂದ್ರ ಹುಲಿಕುಂಟೆ (Jitendra Hulikunte) ಅವರು ಮೈಸೂರಿನ ಒಡನಾಡಿ ಸಂಸ್ಥೆ (Odanadi organisation) ಕ್ರಿಶ್ಚಿಯನ್ ಮಿಶನರಿಗಳಿಂದ ದೇಣಿಗೆ ಪಡೆಯುತ್ತಿರುವ ಸಂಸ್ಥೆಯಾಗಿದ್ದು ಹಿಂದೂ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಮಂಗಳವಾರ ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿದ ಅವರು ಕನ್ನಡ ಚಿತ್ರರಂಗದ ಖ್ಯಾತ ನಟ ಸಾಧು ಕೋಕಿಲ ಮತ್ತು ರಮೇಶ್ ಹೆಸರಿನ ಮಂಡ್ಯ ಮೂಲದ ಉದ್ಯಮಿ ಒಡನಾಡಿ ಸಂಸ್ಥೆಯ ವಿರುದ್ಧ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ ಎಂದು ಹೇಳಿದರು.