ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

ಒಡಿಶಾದಲ್ಲಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಗುಲ್‌ನಿಂದ ಬರಿಪಾಡಾಗೆ ತೆರಳುತ್ತಿದ್ದ ಬಸ್ 50 ರಿಂದ 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಸ್ತೆಯಿಂದ ಸ್ಕಿಡ್ ಆಗಿದೆ. ಭಾನುವಾರ ಅಂಗುಲ್ ಜಿಲ್ಲೆಯ ಗಹಾಮ್ ಬಳಿ ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (OSRTC) ಬಸ್ ಪಲ್ಟಿಯಾಗಿತ್ತು.

ಒಡಿಶಾದಲ್ಲಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಗುಲ್‌ನಿಂದ ಬರಿಪಾಡಾಗೆ ತೆರಳುತ್ತಿದ್ದ ಬಸ್ 50 ರಿಂದ 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಸ್ತೆಯಿಂದ ಸ್ಕಿಡ್ ಆಗಿದೆ. ಭಾನುವಾರ ಅಂಗುಲ್ ಜಿಲ್ಲೆಯ ಗಹಾಮ್ ಬಳಿ ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (OSRTC) ಬಸ್ ಪಲ್ಟಿಯಾಗಿತ್ತು.

ಪೊಲೀಸರು ಮತ್ತು ಸ್ಥಳೀಯರ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿದ ಗಂಭೀರವಾಗಿ ಗಾಯಗೊಂಡಿರುವ 30 ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ಕಳುಹಿಸಲಾಯಿತು. ಅಪಘಾತಕ್ಕೆ ನಿಖರವಾದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ, ಚಾಲಕನು ವಾಹನದ ನಿಯಂತ್ರಣವನ್ನು ಕಳೆದುಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆ ಹೇಳುತ್ತಿದೆ.

ಸದ್ಯ ಪರಾರಿಯಾಗಿರುವ ಚಾಲಕನಿಗಾಗಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಭಾನುವಾರ ಮುಂಜಾನೆ, ಒಡಿಶಾದ ಸುವರ್ಣಪುರ ಜಿಲ್ಲೆಯಲ್ಲಿ ಪಿಕ್ ಅಪ್ ವ್ಯಾನ್ ಪಲ್ಟಿಯಾಗಿ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ್ದಾರೆ . ಗಣರಾಜ್ಯೋತ್ಸವಕ್ಕೆ 10 ನೇ ತರಗತಿಯ 23 ವಿದ್ಯಾರ್ಥಿಗಳನ್ನು ಹೊತ್ತ ವ್ಯಾನ್ ಅಥಗಢ್‌ನ ಉತ್ತರ ಬಂಕಿ ಮಾಲಾ ಬಿಹಾರಪುರ ಸರ್ಕಾರಿ ಶಾಲೆಯಿಂದ ಸರಂದಾ ಮೈದಾನಕ್ಕೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us