Video: ಮಹಾನಗರ ಪಾಲಿಕೆ ಅಧಿಕಾರಿಯ ಕಚೇರಿಯಿಂದ ಎಳೆದೊಯ್ದು ಥಳಿಸಿದ ಗುಂಪು

Updated on: Jul 01, 2025 | 9:37 AM

ದುಷ್ಕರ್ಮಿಗಳು ಒಡಿಶಾದ ಭುವನೇಶ್ವರ ಮಹಾನಗರ ಪಾಲಿಕೆ ಕಚೇರಿಗೆ ತೆರಳಿ ಅಧಿಕಾರಿಯನ್ನು ಕಚೇರಿಯಿಂದ ಎಳೆದು ತಂದು ಥಳಿಸಿರುವ ಘಟನೆ ವರದಿಯಾಗಿದೆ. ಈ ಗಲಾಟೆಯ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಧಿಕಾರಿಯನ್ನು ಮುನ್ಸಿಪಲ್ ಕಾರ್ಪೊರೇಷನ್‌ನ ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹು ಎಂದು ಗುರುತಿಸಲಾಗಿದೆ. ಪೊಲೀಸರಿಗೆ ಹಲ್ಲೆ ಬಗ್ಗೆ ದೂರು ನೀಡಲಾಗಿದೆ. ಅಧಿಕಾರಿಯ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡು ಎಫ್‌ಐಆರ್ ದಾಖಲಿಸಿ ಜೀವನ್ ರಾವತ್, ದೇಬಾಶಿಶ್ ಪ್ರಧಾನ್ ಎಂಬುವವರನ್ನು ಬಂಧಿಸಲಾಗಿದೆ.

ಭುವನೇಶ್ವರ, ಜುಲೈ 01: ದುಷ್ಕರ್ಮಿಗಳು ಒಡಿಶಾದ ಭುವನೇಶ್ವರ ಮಹಾನಗರ ಪಾಲಿಕೆ ಕಚೇರಿಗೆ ತೆರಳಿ ಅಧಿಕಾರಿಯನ್ನು ಕಚೇರಿಯಿಂದ ಧರ ಧರನೆ ಎಳೆದು ತಂದು ಥಳಿಸಿರುವ ಘಟನೆ ವರದಿಯಾಗಿದೆ. ಈ ಗಲಾಟೆಯ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಧಿಕಾರಿಯನ್ನು ಮುನ್ಸಿಪಲ್ ಕಾರ್ಪೊರೇಷನ್‌ನ ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹು ಎಂದು ಗುರುತಿಸಲಾಗಿದೆ. ಪೊಲೀಸರಿಗೆ ಹಲ್ಲೆ ಬಗ್ಗೆ ದೂರು ನೀಡಲಾಗಿದೆ. ಅಧಿಕಾರಿಯ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡು ಎಫ್‌ಐಆರ್ ದಾಖಲಿಸಿ ಜೀವನ್ ರಾವತ್, ದೇಬಾಶಿಶ್ ಪ್ರಧಾನ್ ಎಂಬುವವರನ್ನು ಬಂಧಿಸಲಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us