AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ದುಷ್ಟರ ವಿರುದ್ಧ ಕಠಿಣ ಕ್ರಮ: ಸಿದ್ದರಾಮಯ್ಯ, ಸಿಎಂ

ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ದುಷ್ಟರ ವಿರುದ್ಧ ಕಠಿಣ ಕ್ರಮ: ಸಿದ್ದರಾಮಯ್ಯ, ಸಿಎಂ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Dec 11, 2023 | 1:35 PM

Share

ಗೃಹ ಸಚಿವ ಜಿ ಪರಮೇಶ್ವರ್ ಅವರು ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರವ ಹಲ್ಲೆಗೊಳಗಾದ ವಂಟಿಮೂರಿ ಮಹಿಳೆಯನ್ನು ಭೇಟಿ ಮಾಡಿ ಹಲ್ಲೆ ನಡೆಸಿದ ಜನರ ವಿರುದ್ಧ ಕ್ರಮ ಜರುಗಿಸುವ ಭರವಸೆಯನ್ನು ಅವರ ಕುಟುಂಬಕ್ಕೆ ನೀಡಿದ್ದಾರೆ. ಯುವಕ ಯುವತಿಯ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ ಎಂದು ಬೆಳಗಾವಿ ಪೊಲೀಸ್ ಪೊಲೀಸ್ ಕಮೀಶನರ್ ಎಸ್ ಎನ್ ಸಿದ್ದರಾಮಪ್ಪ ಹೇಳಿದ್ದಾರೆ.

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಲ್ಲಿ ದೊಡ್ಡಮಟ್ಟದ ಚರ್ಚೆಗೆ ಕಾರಣವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಎರಡನೇ ವಾರದ ಕಾರ್ಯಕಲಾಪಗಳಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿ ಸಾಂಬ್ರಾ ವಿಮಾನ ನಿಲ್ದಾಣದ (Sambra airport) ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಸರ್ಕಾರವೇ ಬೆಳಗಾವಿಯಲ್ಲಿದ್ದರೂ (Belagavi) ನಗರದಿಂದ ಕೆಲವೇ ಕಿಮೀಗಳಷ್ಟು ದೂರ ಅಮಾನವೀಯ ಘಟನೆಯೊಂದು ನಡೆದಿದೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸರ್ಕಾರ ಕೇವಲ ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತ ಆಗಿರುವುದಿಲ್ಲ, ಇಡೀ ರಾಜ್ಯದಲ್ಲಿ ಅದು ಕೆಲಸ ಮಾಡುತ್ತಿರುತ್ತದೆ ಎಂದು ಹೇಳಿದರು. ವಂಟಮೂರಿಯಲ್ಲಿ ನಡೆದ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡೋದಿಲ್ಲ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ವಿಷಯಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಅಧಿವೇಶನ ಮುಗಿದ ಬಳಿಕ ಸಮಾಜದ ಮುಖಂಡರು ಮತ್ತು ಸ್ವಾಮೀಜಿಗಳ ಜೊತೆ ಚರ್ಚೆ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.