AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dy CM slams official publicly: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಲಸ ಮಾಡುತ್ತಿರುವ ವೇಗಕ್ಕೆ ಕುದುರಿಕೊಳ್ಳಲು ಅಧಿಕಾರಿಗಳಿಗೆ ಕಷ್ಟವಾಗುತ್ತಿದೆ!

Dy CM slams official publicly: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಲಸ ಮಾಡುತ್ತಿರುವ ವೇಗಕ್ಕೆ ಕುದುರಿಕೊಳ್ಳಲು ಅಧಿಕಾರಿಗಳಿಗೆ ಕಷ್ಟವಾಗುತ್ತಿದೆ!

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 05, 2023 | 1:07 PM

ಒಬ್ಬ ಮಹಿಳಾ ಅರಣ್ಯಾಧಿಕಾರಿಯ ಕಾರ್ಯವೈಖರಿ ಬಗ್ಗೆ ಶಿವಕುಮಾರ್ ಸಾರ್ವಜನಿಕವಾಗಿ ಬೇಸರ ಹಾಗೂ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅಗ್ರೆಸಿವ್ ಆಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಕೆಲಸ ಕಾರ್ಯಗಳಲ್ಲಿ ತಮ್ಮೊಂದಿಗೆ ವೇಗ (pace) ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡುತ್ತಿದ್ದಾರೆ. ನಗರದ ರಾಚೇನಹಳ್ಳಿ ಕೆರೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನ (World Environment Day) ಕಾರ್ಯಕ್ರಮದಲ್ಲಿ ಭಾಗವಹಿಸಿ ಗಿಡನೆಡುವ ಕೆಲಸಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ಶಿವಕುಮಾರ್ ಹೇಳಿದರು. ಅದೇ ಸಂದರ್ಭದಲ್ಲಿ ಒಬ್ಬ ಮಹಿಳಾ ಅರಣ್ಯಾಧಿಕಾರಿಯ (Forest officer) ಕಾರ್ಯವೈಖರಿ ಬಗ್ಗೆ ಸಾರ್ವಜನಿಕವಾಗಿ ಬೇಸರ ಹಾಗೂ ಅಸಮಾಧಾನ ವ್ಯಕ್ತಪಡಿಸಿದ ಅವರು ಹೆಚ್ಚಿನ ಶ್ರದ್ಧೆವಹಿಸಿ ಕೆಲಸ ಮಾಡುವಂತೆ ಸೂಚಿಸಿದರು. ಅವರ ಮಾತಿನಿಂದ ಅಧೀರಳಾದ ಅಧಿಕಾರಿಣಿ ಗೋಣು ಅಲ್ಲಾಡಿಸುವುದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ