ಗೃಹಲಕ್ಷ್ಮೀ ಯೋಜನೆ ತನಗೆ ಬೇಡವೆಂದು ನಯವಾಗಿ ತಿರಸ್ಕರಿಸಿ, ಸ್ವಾಭಿಮಾನ ಮೆರೆದ ಅಜ್ಜಿ ಏನು ಹೇಳಿದರು ಕೇಳಿ

Edited By: ಸಾಧು ಶ್ರೀನಾಥ್​

Updated on: Sep 02, 2023 | 12:47 PM

ಕೊಪ್ಪಳ: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್​​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆ ತನಗೆ ಬೇಡವೆಂದು ವೃದ್ಧ ಮಹಿಳೆಯೊಬ್ಬರು ನಯವಾಗಿ ತಿರಸ್ಕರಿಸಿ, ಸ್ವಾಭಿಮಾನ ಮೆರೆದಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ನಿಡಶೇಷಿ ಗ್ರಾಮದ ವಯೋವೃದ್ದೆಯಿಂದ ಈ ಸ್ವಾಭಿಮಾನದ ಮಾತು ಕೇಳಿಬಂದಿದೆ. ಶಿವಮ್ಮ‌ ಸಜ್ಜನ್ ಎಂಬುವವರೇ ಆ ಸ್ವಾಭಿಮಾನಿ ಮಹಿಳೆ.

ಕೊಪ್ಪಳ: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್​​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆ ತನಗೆ ಬೇಡವೆಂದು ವೃದ್ಧ ಮಹಿಳೆಯೊಬ್ಬರು ನಯವಾಗಿ ತಿರಸ್ಕರಿಸಿ, ಸ್ವಾಭಿಮಾನ ಮೆರೆದಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ನಿಡಶೇಷಿ ಗ್ರಾಮದ ವಯೋವೃದ್ದೆಯಿಂದ ಈ ಸ್ವಾಭಿಮಾನದ ಮಾತು ಕೇಳಿಬಂದಿದೆ. ಶಿವಮ್ಮ‌ ಸಜ್ಜನ್ ಎಂಬುವವರೇ ಆ ಸ್ವಾಭಿಮಾನಿ ಮಹಿಳೆ.

ದೇವರು ನನಗೆ ಎಲ್ಲವೂ ಕರುಣಿಸಿದ್ದಾನೆ. ಇರೋ ಸವಲತ್ತಿನಲ್ಲೆ ಸಂತೃಪ್ತ ಜೀವನ ನಡೆಸುತ್ತಿದ್ದೇನೆ. ಸರ್ಕಾರದ ಗೃಹಲಕ್ಷ್ಮೀ ಯೋಜನಾ ಮೊತ್ತವಾದ ೨ ಸಾವಿರ ರೂ ಬೇಡವೆಂದು ಅಜ್ಜಿ ತಿಳಿಸಿದ್ದಾರೆ. ಈ ಹಿಂದೆ ತಾನು ಕೂಡಿಟ್ಟಿದ್ದ ಹಣವನ್ನೆಲ್ಲ ಗ್ರಾಮದ ಕೆರೆ ಅಭಿವೃಧ್ಧಿಗೆ ನೀಡಿ ಮಾದರಿಯಾಗಿದ್ದ ಅಜ್ಜಿ, ಸಧ್ಯ ಮತ್ತೊಮ್ಮೆ ಮಾದರಿ ನಿರ್ಧಾರ ತೆಗದುಕೊಂಡಿದ್ದಾರೆ. ಅಜ್ಜಿಯ ಈ ನಿರ್ಧಾರಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 02, 2023 12:44 PM
Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More