AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಶಕಗಳ ಬಳಿಕ ಮಂಗಳೂರು ಕಡಲ ತೀರದಲ್ಲಿ ಕಾಣಿಸಿಕೊಂಡ ಕಡಲಾಮೆ

3 ದಶಕಗಳ ಬಳಿಕ ಮಂಗಳೂರು ಕಡಲ ತೀರದಲ್ಲಿ ಕಾಣಿಸಿಕೊಂಡ ಕಡಲಾಮೆ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ವಿವೇಕ ಬಿರಾದಾರ|

Updated on:Feb 04, 2025 | 2:52 PM

Share

ಮಂಗಳೂರಿನ ಸಸಿಹಿತ್ಲು ಕಡಲ ತೀರದಲ್ಲಿ ಮೂರು ದಶಕಗಳ ಬಳಿಕ ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲೆ ಕಡಲಾಮೆಗಳು ಮೊಟ್ಟೆ ಇಟ್ಟಿರುವುದು ಕಂಡುಬಂದಿದೆ. ಸ್ಥಳೀಯ ಮೀನುಗಾರರು ಮೊಟ್ಟೆಗಳ ರಕ್ಷಣೆಗೆ ನಿಗಾ ವಹಿಸುತ್ತಿದ್ದಾರೆ. ಈ ಹಿಂದೆ ಮಂಗಳೂರಿನ ಸುತ್ತಮುತ್ತಲಿನ 12 ಕಡೆಗಳಲ್ಲಿ ಕಡಲಾಮೆ ಮೊಟ್ಟೆಗಳು ಪತ್ತೆಯಾಗಿದ್ದವು. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಆಮೆಗಳನ್ನು ರಕ್ಷಿಸಲಾಗಿದೆ. ತಾವು ಹುಟ್ಟಿದ ಸ್ಥಳಕ್ಕೆ ಮರಳಿ ಮೊಟ್ಟೆ ಇಡುವ ಈ ಆಮೆಗಳ ಮರಳುವಿಕೆ ವಿಶೇಷವಾಗಿದೆ.

ಮಂಗಳೂರು, ಫೆಬ್ರವರಿ 04: ಸುಮಾರು ಮೂರು ದಶಕಗಳ ಬಳಿಕ ಮಂಗಳೂರು ಹೊರವಲಯದ ಸಸಿಹಿತ್ಲು ಕಡಲ ತೀರದಲ್ಲಿ ಅಳಿವಿನಚಿನ ಅತ್ಯಂತ ಅಪರೂಪದ ಒಲೀವ್ ರಿಡ್ಲೆ ಕಡಲಾಮೆಗಳು ಕಾಣಿಸಿಕೊಂಡಿವೆ. ಕಡಲಾಮೆ ಒಲೀವ್ ರಿಡ್ಲೆ ಮಂಗಳೂರು ಕಡಲ ಕಿನಾರೆಗೆ ಬಂದು ಮೊಟ್ಟೆ ಇಟ್ಟಿವೆ. ಮಂಗಳೂರು ಹೊರವಲಯದ ಸಸಿಹಿತ್ಲು ಕಡಲ ತಡಿಗೆ ಬಂದು ಮೊಟ್ಟೆ ಇಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೊಟ್ಟೆಗಳ ಸಂರಕ್ಷಣೆಗೆ ಸ್ಥಳೀಯ ಮೀನುಗಾರರ ವಿಶೇಷ ನಿಗಾ ವಹಿಸಿದ್ದಾರೆ. ಈ ಹಿಂದೆ ಮಂಗಳೂರಿನ ಸುತ್ತ ಮುತ್ತ ಸುಮಾರು 12 ಕಡೆ ಕಡಲಾಮೆ ಮೊಟ್ಟೆಗಳು ಪತ್ತೆಯಾಗಿದ್ದವು. ಈ ಹಿಂದೆ ಮಂಗಳೂರಿನ ಕಡಲತಡಿಯ ತಣ್ಣೀರು ಬಾವಿ, ಸಸಿಹಿತ್ಲು, ಬೆಂಗ್ರೆ ಪ್ರದೇಶಕ್ಕೆ ಕಡಲಾಮೆಗಳು ಬರುತ್ತಿದ್ದವು. ಅಳಿವಿನಂಚಿನಲ್ಲಿದ್ದ ಒಲೀವ್ ರಿಡ್ಲೆ ತಳಿಯ ಕಡಲಾಮೆಗಳನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅನುಸೂಚಿ 1 ರ ಅಡಿಯಲ್ಲಿ ರಕ್ಷಣೆ ಮಾಡಲಾಗುತ್ತದೆ. ಒಲೀವ್ ರಿಡ್ಲೆ ಕಡಲಾಮೆಗಳ ವಿಶೇಷವೆಂದರೆ ತಾವು ಹುಟ್ಟಿದ ಜಾಗಕ್ಕೆ ಮರಳಿ ಬಂದು ಮೊಟ್ಟೆಯಿಡುತ್ತವೆ.

Published on: Feb 04, 2025 02:51 PM

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More