‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ

Edited By:

Updated on: Mar 02, 2026 | 9:03 PM

‘ಭೀಮ ತೀರದಲ್ಲಿ’ ಚಿತ್ರ 2012ರಲ್ಲಿ ರಿಲೀಸ್ ಆಗಿತ್ತು. ದುನಿಯಾ ವಿಜಯ್ ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. 14 ವರ್ಷಗಳ ಬಳಿಕ ಈ ಸಿನಿಮಾವನ್ನು ರೀ-ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್, ನಿರ್ದೇಶಕ ಓಂ ಪ್ರಕಾಶ್ ರಾವ್ ಮಾತಾಡಿದ್ದಾರೆ.

ನೈಜ ಘಟನೆ ಆಧಾರಿತ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ದುನಿಯಾ ವಿಜಯ್ ಅವರು ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. ಈಗ 14 ವರ್ಷಗಳ ಬಳಿಕ ಈ ಚಿತ್ರವನ್ನು ಮತ್ತೆ ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ಅವರು ಮಾತಾಡಿದ್ದಾರೆ. ‘ಈ ರೀತಿಯ ಸಿನಿಮಾವನ್ನು ನಮಗೆ ಈಗ ಮಾಡೋಕೆ ಆಗಲ್ಲ. ಹೊಸ ತಂತ್ರಜ್ಞಾನವನ್ನು ಅಳವಡಿಸಿ ಮರು ಬಿಡುಗಡೆ ಮಾಡುತ್ತಿದ್ದೇವೆ. ನಮ್ಮ ನಿರ್ದೇಶಕರು ತುಂಬಾ ಅಡ್ವಾನ್ಸ್ ಆಗಿ ಇಂಥ ಸಿನಿಮಾ ಮಾಡಿದ್ದರು. ನಮ್ಮ ಸಿನಿಮಾ ನೋಡಿ ಬೇರೆಯವರು ಸ್ಫೂರ್ತಿ ಪಡೆದಿದ್ದಾರೆ ಎನಿಸುತ್ತದೆ. ಇದು ರಿಯಲಿಸ್ಟಿಕ್ ಕಥೆ ಇರುವ ಸಿನಿಮಾ. ನಮ್ಮ ಇಡೀ ತಂಡ ಬಹಳ ಕಷ್ಟಪಟ್ಟು ಈ ಸಿನಿಮಾ ಮಾಡಿದ್ದೆವು’ ಎಂದು ನಿರ್ಮಾಪಕ ಅಣಜಿ ನಾಗರಾಜ್ (Anaji Nagaraj) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us