‘ಅಂಬರೀಶ್​ ಇದ್ದಿದ್ರೆ ದರ್ಶನ್​ ಕಪಾಳಕ್ಕೆ ಹೊಡೆಯುತ್ತಿದ್ದರು’: ಓಂ ಪ್ರಕಾಶ್​ ರಾವ್​

ಚಿತ್ರರಂಗಕ್ಕೆ ಅಂಬರೀಶ್​ ಹಿರಿಯಣ್ಣನ ರೀತಿ ಇದ್ದರು. ಅವರಿಗೆ ದರ್ಶನ್​ ಕೂಡ ತುಂಬ ಗೌರವ ನೀಡುತ್ತಿದ್ದರು. ಈಗ ದರ್ಶನ್​ ಅವರು ಕೊಲೆ ಆರೋಪದ ಮೇಲೆ ಜೈಲು ಸೇರಿದ್ದಾರೆ. ಈ ಬಗ್ಗೆ ಓಂ ಪ್ರಕಾಶ್​ ರಾವ್​ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಅಂಬರೀಶಣ್ಣ ಈಗ ಇದ್ದಿದ್ದರೆ ದರ್ಶನ್​ಗೆ ಕಪಾಳಕ್ಕೆ ಹೊಡೆಯುತ್ತಿದ್ದರು. ಬಾರೋ ಇಲ್ಲಿ ಅಂತ ಕರೆದು ಬುದ್ಧಿ ಹೇಳುತ್ತಿದ್ದರು’ ಎಂದಿದ್ದಾರೆ ಓಂ ಪ್ರಕಾಶ್​ ರಾವ್.

‘ಅಂಬರೀಶ್​ ಇದ್ದಿದ್ರೆ ದರ್ಶನ್​ ಕಪಾಳಕ್ಕೆ ಹೊಡೆಯುತ್ತಿದ್ದರು’: ಓಂ ಪ್ರಕಾಶ್​ ರಾವ್​
| Updated By: ಮದನ್​ ಕುಮಾರ್​

Updated on: Jun 23, 2024 | 5:06 PM

ನಟ ದರ್ಶನ್​ (Darshan) ಈಗ ಜೈಲು ಪಾಲಾಗಿರುವ ಬಗ್ಗೆ ಅವರ ಆಪ್ತರು ಹಾಗೂ ಅಭಿಮಾನಿಗಳಿಗೆ ಬೇಸರ ಇದೆ. ಚಿತ್ರರಂಗದಲ್ಲಿ ಅನೇಕರ ಜೊತೆ ದರ್ಶನ್​ಗೆ ಉತ್ತಮ ಒಡನಾಟ ಇತ್ತು. ರೆಬಲ್​ ಸ್ಟಾರ್​ ಅಂಬರೀಶ್​ ಅವರಿಗೆ ದರ್ಶನ್​ ಅಪಾರ ಗೌರವ ನೀಡುತ್ತಿದ್ದರು. ಒಂದು ವೇಳೆ ಇಂದು ಅಂಬರೀಶ್​ (Ambareesh) ಇದ್ದಿದ್ದರೆ ಪರಿಸ್ಥಿತಿ ಹೇಗಿರುತ್ತಿತ್ತು ಎಂಬ ಬಗ್ಗೆ ಹಿರಿಯ ನಿರ್ದೇಶಕ ಓಂ ಪ್ರಕಾಶ್​ ರಾವ್​ ಮಾತನಾಡಿದ್ದಾರೆ. ‘ಅಂಬರೀಶಣ್ಣ ಇದ್ದಿದ್ರೆ ದರ್ಶನ್​ ಕಪಾಳಕ್ಕೆ ಹೊಡೆಯುತ್ತಿದ್ದರು. ಕರೆದು ಬುದ್ಧಿ ಹೇಳುತ್ತಿದ್ದರು. ಬಾರೋ ಇಲ್ಲಿ.. ನೀನು ಮಾಡುತ್ತಿರುವುದು ತಪ್ಪು ಅಂತ ಖಂಡಿತಾ ಹೇಳಿರುತ್ತಿದ್ದರು. ಸುಮಲತಾ ಕೂಡ ಮಾತನಾಡುತ್ತಾರೆ. ಅದರ ಬಗ್ಗೆ ಅನುಮಾನ ಬೇಡ’ ಎಂದು ಓಂ ಪ್ರಕಾಶ್​ ರಾವ್​ (Om Prakash Rao) ಹೇಳಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಹತ್ಯೆ ಮಾಡಿದ ಆರೋಪದಿಂದ ದರ್ಶನ್ ಮತ್ತು ಅವರ ಸಹಚರರು ಜೈಲು ಸೇರಿದ್ದಾರೆ. ಈ ಕೇಸ್​ನಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ