ಬಾಗಲಕೋಟೆ; ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಯರು

Edited By: ಆಯೇಷಾ ಬಾನು

Updated on: Sep 10, 2024 | 10:07 AM

ಬಾಗಲಕೋಟೆ ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಹಬ್ಬದ ಸಂಭ್ರಮ ಮನೆ ಮಾಡಿದೆ. ಓಣಂ ಹಬ್ಬದ ಸಾಂಪ್ರದಾಯಿಕ ನೃತ್ಯ, ಚಂಡೆ ವಾದ್ಯ, ಉಡುಗೆ ತೊಡುಗೆ, ಹೂವಿನ‌ ರಂಗೋಲಿ ಗಮನ ಸೆಳೆದಿದ್ದು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕುಣಿದು ಕುಪ್ಪಳಿಸಿದ್ದಾರೆ. ಕೇರಳದಲ್ಲಿ ಜಾತಿ, ಧರ್ಮ ಎನ್ನದೆ ಸರ್ವರು ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ಆಚರಿಸಿದ್ದಾರೆ.

ಬಾಗಲಕೋಟೆ, ಸೆ.10: ಬಾಗಲಕೋಟೆ ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಹಬ್ಬದ ಸಂಭ್ರಮ ಮನೆ ಮಾಡಿದೆ. ಮೆಡಿಕಲ್, ನರ್ಸಿಂಗ್ ಸೇರಿದಂತೆ ವಿವಿಧ ಅಧ್ಯಯನ ಮಾಡುತ್ತಿರುವ ಕೇರಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದ್ದಾರೆ. 500ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಓಣಂ ಆಚರಣೆ ಮಾಡಲಾಗಿದೆ. ಕೇರಳದಲ್ಲಿ ಜಾತಿ, ಧರ್ಮ ಎನ್ನದೆ ಸರ್ವರು ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ಆಚರಿಸಿದ್ದಾರೆ.

ಕೇರಳದ ಜನರಿಗೆ ಪ್ರಮುಖ ವಾರ್ಷಿಕ ಕಾರ್ಯಕ್ರಮ ಓಣಂ. ಸದ್ಯ ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದ್ದಾರೆ. ಕಾಲೇಜ್ ಕ್ಯಾಂಪಸ್ ನ ಶಿವಾಲಯ ದೇವಾಲಯದಿಂದ ಮೆರವಣಿಗೆ ಮಾಡಿದ್ದಾರೆ. ತಮ್ಮ ಮನೆಯಲ್ಲಿ ಪ್ರತಿ ವರ್ಷ ಓಣಂ ಆಚರಿಸುತ್ತೇವೆ. ಈಗ ನಮ್ಮ ಕಾಲೇಜ್ ನಲ್ಲಿ ಎಲ್ಲ ಸ್ನೇಹಿತರ ಜೊತೆ ಹಬ್ಬ ಆಚರಿಸುತ್ತಿರುವ ಬಗ್ಗೆ ವಿದ್ಯಾರ್ಥಿನಿಯರು ಹರ್ಷ ವ್ಯಕ್ತಪಡಿಸಿದ್ದಾರೆ. ಓಣಂ ಆಚರಣೆಯಲ್ಲಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ, ಮೆಡಿಕಲ್ ಕಾಲೇಜ್ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಸೇರಿದಂತೆ ಕಾಲೇಜ್ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಓಣಂ ಹಬ್ಬದ ಸಾಂಪ್ರದಾಯಿಕ ನೃತ್ಯ, ಚಂಡೆ ವಾದ್ಯ, ಉಡುಗೆ ತೊಡುಗೆ, ಹೂವಿನ‌ ರಂಗೋಲಿ ಗಮನ ಸೆಳೆದಿದೆ,

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Sep 10, 2024 10:07 AM
Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More