AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬಂದಾಗ ಅತಿಹೆಚ್ಚು ಫಲಾನುಭವಿ ಕುಮಾರಸ್ವಾಮಿ ಆಗಲಿದ್ದಾರೆ: ಶಿವಕುಮಾರ್

ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬಂದಾಗ ಅತಿಹೆಚ್ಚು ಫಲಾನುಭವಿ ಕುಮಾರಸ್ವಾಮಿ ಆಗಲಿದ್ದಾರೆ: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 18, 2025 | 7:35 PM

Share

ಕುಮಾರಸ್ವಾಮಿ ಅವರ ಬಿಡದಿ ಬಳಿಯ ಜಮೀನಲ್ಲಿ ಕೋರ್ಟ್ ಆದೇಶದ ಮೇರೆಗೆ ತೆರವು ಕಾರ್ಯಾಚರಣೆ ಬಗ್ಗೆ ಕೇಂದ್ರ ಸಚಿವ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಅವರು ರಾಜಕೀಯದ ಹೇಳಿಕೆಗಳನ್ನು ನೀಡುತ್ತಿರುತ್ತಾರೆ, ಕುಮಾರಸ್ವಾಮಿ ನನ್ನನ್ನು ಬಯ್ಯದೆ ಮತ್ಯಾರನ್ನು ಬಯ್ಯುತ್ತಾರೆ, ಅವರ ಜಮೀನು ಪಕ್ಕದಲ್ಲಿ ನನ್ನ ಜಮೀನು ಇಟ್ಕೊಂಡು ಚೇಷ್ಟೆ ಮಾಡಲು ಸಾಧ್ಯವಾಗುತ್ತಾ ಎಂದು ಪ್ರಶ್ನಿಸಿದರು.

ದೆಹಲಿ, ಮಾರ್ಚ್ 18: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್, ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ) ಮಾರ್ಚ್ 27 ಮತ್ತು 28ರಂದು ಅಹ್ಮದಾಬಾದ್ ನಗರದ ಸಬರಮತಿ ಆಶ್ರಮದ (Sabarmati Ashram) ಪಕ್ಕದಲ್ಲಿ ಒಂದು ಮೀಟಿಂಗ್ ಇಟ್ಟುಕೊಂಡಿದೆ, ಪಕ್ಷದ ಹಿರಿಯ ನಾಯಕರು, ಸಂಸದರು ಮತ್ತು ಡಿಸಿಸಿ ಪದಾಧಿಕಾರಿಗಳು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು. ಅಂತಾರಾಷ್ಟ್ರೀಯ ಪರಿಕಲ್ಪನೆಯೊಂದಿಗೆ ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಅಗಿ ಪರಿವರ್ತಿಸಲು ಸಚಿವ ಸಂಪುಟದ ಅನುಮೋದನೆ ಪಡೆದುಕೊಂಡಿದ್ದೇನೆ, ಒಳ್ಳೆಯ ಕೆಲಸ ಆಗುವಾಗ ಒಂದಷ್ಟು ಅಡಚಣೆ ಆಗೇ ಆಗುತ್ತವೆ, ಗ್ರೇಟರ್ ಬೆಂಗಳೂರುನಿಂದ ಹೆಚ್ಚಿನ ಲಾಭ ಕುಮಾರಸ್ವಾಮಿಯವರಿಗಿದೆ ಎಂದು ಶಿವಕುಮಾರ್ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.