ಸುದೀಪ್ ಟ್ವೀಟ್ ಬೆನ್ನಲ್ಲೇ ವಾಲ್ಮೀಕಿ ಜಾತ್ರೆಗೆ ಆಹ್ವಾನ್ ನೀಡಿದ್ದ ಫೋಟೋ ವೈರಲ್

Updated on: Feb 10, 2023 | 9:31 AM

ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ನೀಡಲು ಹೋಗಿದ್ದ ಫೋಟೋ ವೈರಲ್ ಆಗಿದೆ. ಸುದೀಪ್ ಮನೆಯಲ್ಲಿ ಇಲ್ಲದ ಕಾರಣ ಅವರ ತಂದೆ ಸಂಜೀವ್ ಕೈಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿದ್ದರು.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದ ವಾಕ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಗೈರಾಗಿದ್ದ ವಿಚಾರ ಸಾಕಷ್ಟು ಚರ್ಚೆ ಆಗಿತ್ತು. ಸುದೀಪ್ (Kichcha Sudeep) ಬರದೇ ಇದ್ದಿದ್ದಕ್ಕೆ ಅಭಿಮಾನಿಗಳು ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿದ್ದರು. ‘ನನಗೆ ಆಯೋಜಕರಿಂದ ಆಹ್ವಾನ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮವನ್ನು ಯಾವಾಗಲೂ ತಪ್ಪಿಸಿಲ್ಲ’ ಎಂದು ಅವರು ಟ್ವೀಟ್ ಮಾಡಿದ್ದರು. ಈ ಬೆನ್ನಲ್ಲೇ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ನೀಡಲು ಹೋಗಿದ್ದ ಫೋಟೋ ವೈರಲ್ ಆಗಿದೆ. ಸುದೀಪ್ ಮನೆಯಲ್ಲಿ ಇಲ್ಲದ ಕಾರಣ ಅವರ ತಂದೆ ಸಂಜೀವ್ ಕೈಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More