ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ, ಕರಾವಳಿ ಉದ್ವಿಗ್ನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇಡಿಗೆ ಸೇಡು ಮುಂದುವರಿದಿದೆ. ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ಈ ಘಟನೆ ನಡೆದಿದೆ. ಇನ್ನು ಕೊಲೆಯಾದ ಸುಹಾಸ್ ಶೆಟ್ಟಿ ಬಿಜೆಪಿ ಕಾರ್ಯಕರ್ತ ಪ್ರವಿಣ್ ನೆಟ್ಟಾರ್ ಹತ್ಯೆಗೆ ಪ್ರತಿಕಾರವಾಗಿ 2022ರ ಜುಲೈ 28ರಂದು ನಡೆದಿದ್ದ ಫಾಜಿಲ್ ಕೊಲೆ ಪ್ರಕರಣ ಆರೋಪಿಯಾಗಿದ್ದ.
ಮಂಗಳೂರು, (ಮೇ 01): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇಡಿಗೆ ಸೇಡು ಮುಂದುವರಿದಿದೆ. ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ಈ ಘಟನೆ ನಡೆದಿದೆ. ಇನ್ನು ಕೊಲೆಯಾದ ಸುಹಾಸ್ ಶೆಟ್ಟಿ ಬಿಜೆಪಿ ಕಾರ್ಯಕರ್ತ ಪ್ರವಿಣ್ ನೆಟ್ಟಾರ್ ಹತ್ಯೆಗೆ ಪ್ರತಿಕಾರವಾಗಿ 2022ರ ಜುಲೈ 28ರಂದು ನಡೆದಿದ್ದ ಫಾಜಿಲ್ ಕೊಲೆ ಪ್ರಕರಣ ಆರೋಪಿಯಾಗಿದ್ದ. ಇದೇ ಸೇಡಿಗೆ ಇದೀಗ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಲಾಗಿದೆ. ಈ ಕೊಲೆಯಿಂದಾಗಿ ಮತ್ತೆ ಕರಾವಳಿ ಉದ್ವಿಗ್ನಗೊಂಡಿದ್ದು, ಮುಂಜಾಗ್ರತಾಕ್ರಮವಾಗಿ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಮಂಗಳೂರು ಹಲವೆಡೆ ನಾಕಾಬಂದಿ ಹಾಕಲಾಗಿದ್ದು, ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

