ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ

Updated on: Jun 08, 2025 | 5:24 PM

Renuka Swamy murder: ರೇಣುಕಾ ಸ್ವಾಮಿ ಕೊಲೆಯಾಗಿ ಇಂದಿಗೆ ಒಂದು ವರ್ಷ. ಪ್ರಕರಣದಲ್ಲಿ ಆರೋಪಿಗಳಾಗಿರುವ ಎಲ್ಲರೂ ಜಾಮೀನಿನ ಮೇಲೆ ಹೊರಗೆ ಬಂದಿದ್ದು, ಎಲ್ಲರೂ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ. ದರ್ಶನ್ ಸಿನಿಮಾಗಳಲ್ಲಿ ಬ್ಯುಸಿ, ಇತ್ತೀಚೆಗೆ ಅದ್ಧೂರಿಯಾಗಿ ವಿವಾಹ ವಾರ್ಷಿಕೋತ್ಸವ ಸಹ ಆಚರಿಸಿದ್ದಾರೆ. ಪವಿತ್ರಾ ತಮ್ಮ ಉದ್ಯಮದಲ್ಲಿ ಬ್ಯುಸಿಯಾಗಿದ್ದಾರೆ.

ದರ್ಶನ್ (Darshan), ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳು ಕೊಂದಿದ್ದಾರೆ ಎಂದು ಹೇಳಲಾಗುತ್ತಿರುವ ರೇಣುಕಾ ಸ್ವಾಮಿ ಮೃತಪಟ್ಟು ಇಂದಿಗೆ (ಜೂನ್ 08) ಒಂದು ವರ್ಷ. ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಎಲ್ಲರೂ ಜಾಮೀನಿನ ಮೇಲೆ ಹೊರಗೆ ಬಂದಿದ್ದು, ಎಲ್ಲರೂ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ. ದರ್ಶನ್ ಸಿನಿಮಾಗಳಲ್ಲಿ ಬ್ಯುಸಿ, ಇತ್ತೀಚೆಗೆ ಅದ್ಧೂರಿಯಾಗಿ ವಿವಾಹ ವಾರ್ಷಿಕೋತ್ಸವ ಸಹ ಆಚರಿಸಿದ್ದಾರೆ. ಪವಿತ್ರಾ ತಮ್ಮ ಉದ್ಯಮದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ರೇಣುಕಾ ಸ್ವಾಮಿ ಕುಟುಂಬದವರು ಆ ನೋವಿನಿಂದ ಇನ್ನೂ ಹೊರಬಂದಿಲ್ಲ. ರೇಣುಕಾ ಸ್ವಾಮಿ ಕುಟುಂಬದವರು ಇಂದು ರೇಣುಕಾ ಸ್ವಾಮಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮತ್ತೊಮ್ಮೆ ಆತನ ನೆನಪು ಮಾಡಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More