AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ; ಡ್ರೈವರ್, ಕ್ಲೀನರ್ ಬಚಾವ್!

ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ; ಡ್ರೈವರ್, ಕ್ಲೀನರ್ ಬಚಾವ್!

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 13, 2026 | 11:29 AM

Share

ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ವಡ್ಡರಹಳ್ಳಿ ಗ್ರಾಮದ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಈರುಳ್ಳಿ ತುಂಬಿದ್ದ ಕ್ಯಾಂಟರ್ ಪಲ್ಟಿಯಾಗಿದೆ. ಬೆಂಗಳೂರಿನಿಂದ ಚಿತ್ತೂರಿಗೆ ಸಾಗಿಸುತ್ತಿದ್ದ ಈರುಳ್ಳಿ ಮತ್ತು ಬೆಳ್ಳುಳ್ಳಿ ರಸ್ತೆಯಲ್ಲೇ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಕೋಲಾರ, ಸೆಪ್ಟೆಂಬರ್ 13: ಜಿಲ್ಲೆಯ ಕೆಜಿಎಫ್ ತಾಲೂಕಿನ ವಡ್ಡರಹಳ್ಳಿ ಗ್ರಾಮದ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿಯಾಗಿದೆ. ಬೆಂಗಳೂರಿನಿಂದ ಚಿತ್ತೂರಿಗೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಸಾಗಿಸುತ್ತಿದ್ದ ಈ ಕ್ಯಾಂಟರ್, ನಿನ್ನೆ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ರಸ್ತೆಗೆ ಉರುಳಿಬಿದ್ದಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್‌ನಲ್ಲಿದ್ದ ಈರುಳ್ಳಿ ಮತ್ತು ಬೆಳ್ಳುಳ್ಳಿ ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಸ್ತೆ ತೆರವುಗೊಳಿಸಲು ಕ್ರಮ ಕೈಗೊಂಡರು. ಅದೃಷ್ಟವಶಾತ್, ಅಪಘಾತ ಸಂಭವಿಸಿದ ವೇಳೆ ಕ್ಯಾಂಟರ್‌ನಲ್ಲಿದ್ದ ಚಾಲಕ ಮತ್ತು ಕ್ಲೀನರ್ ಇಬ್ಬರೂ ಸ್ಥಳದಲ್ಲೇ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ. ಹೆಚ್ಚಿನ ವಿವರಗಳು ತಿಳಿದುಬಂದಿಲ್ಲವಾದರೂ, ಚಾಲಕನ ಅತಿ ವೇಗ ಅಥವಾ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us