ಈರುಳ್ಳಿ ಬೆಲೆ ಕುಸಿತ; ಲೋಡ್​ಗಟ್ಟಲೇ ಈರುಳ್ಳಿ ಬಿಟ್ಟುಹೋದ ರಾಯಚೂರು ರೈತರು

Updated on: Oct 05, 2025 | 11:21 AM

Onion price: ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಕುಸಿತವಾಗಿದ್ದು, ಬೆಳೆಯಿಂದ ಯಾವುದೇ ಆದಾಯವಿಲ್ಲದೇ ರಾಯಚೂರು ರೈತರು ಕಂಗಾಲಾಗಿದ್ದಾರೆ. ಬೆಳೆಗಾರರು ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಲೋಡ್​​ಗಟ್ಟಲೆ ಈರುಳ್ಳಿಯನ್ನು ಬಿಟ್ಟು ಹೋಗಿದ್ದಾರೆ. ಸರ್ಕಾರ ನಿಗದಿ ಪಡಿಸಿದ ಬೆಲೆಯೂ ಸಿಗದಿದ್ದರೆ ಜೀವನ ಮಾಡುವುವು ಕಷ್ಟವೆಂದು ರೈತರು ಕಣ್ಣೀರಿಟ್ಟಿದ್ದಾರೆ.

ರಾಯಚೂರು, ಅಕ್ಟೋಬರ್ 5: ಕಳೆದ ಕೆಲವು ದಿನಗಳಿಂದ ಈರುಳ್ಳಿ ದರ ಸಂಪೂರ್ಣವಾಗಿ ಕುಸಿದಿದ್ದು, ರಾಯಚೂರಿನ ರೈತರು ಕಂಗಾಲಾಗಿದ್ದಾರೆ. ಬೆಲೆ ಇಳಿಕೆಯಾದ ಹಿನ್ನೆಲೆ ರೈತರು ಲೋಡ್​ಗಟ್ಟಲೆ ಈರುಳ್ಳಿ ಬೆಳೆಯನ್ನು ರಾಯಚೂರು ನಗರದ ಏಪಿಎಂಸಿಯಲ್ಲಿಯೇ ಬಿಟ್ಟುಹೋಗಿದ್ದಾರೆ. ಸರ್ಕಾರ ನಿಗದಿ ಮಾಡಿರುವ ಬೆಲೆ ನೀಡಿದರೆ ರೈತರು ಉಳಿಯುತ್ತಾರೆಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ಬೆಲೆಯ ಈರುಳ್ಳಿ ಬೆಳೆ ಜಾನುವಾರುಗಳ ಪಾಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

 

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More