ಪಿಎಸ್ ಐ ನೇಮಕಾತಿ ಹಗರಣ ತನಿಖೆ ಪೂರ್ಣಗೊಳ್ಳದ ಹೊರತು ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗದು: ಜಿ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 31, 2023 | 6:01 PM

ಇನ್ನೂ 400 ಕ್ಕಿಂತ ಹೆಚ್ಚು ಪಿಎಸ್ ಐಗಳ ನೇಮಕಾತಿಗೆಇಲಾಖೆಯಿಂದ ಪ್ರಸ್ತಾವನೆ ಬಂದಿದೆ, ಅಂದರೆ ಸುಮಾರು ಸಾವಿರಕ್ಕೂ ಹೆಚ್ಚು ಪಿಎಸ್ ಗಳ ನೇಮಕಾತಿ ಮಾಡಬೇಕಾಗುತ್ತದೆ ಎಂದು ಪರಮೇಶ್ವರ್ ಹೇಳಿದರು

ತುಮಕೂರು: ಗೃಹ ಸಚಿವ ಜಿ ಪರಮೇಶ್ವರ್ (home minister G Parameshwar) ಪಿಎಸ್ ಐ ನೇಮಕಾತಿ ಹಗರಣಕ್ಕೆ (PSI Recruitment Scam) ಸಂಬಂಧಿಸಿದಂತೆ ಒಂದಷ್ಟು ಮಾಹಿತಿಯನ್ನು ಮಾಧ್ಯಮ ಪ್ರತಿನಿಧಿಗಳಿಗೆ ನೀಡಿದರು. 545 ಪಿಎಸ್ ಐ ಗಳ ನೇಮಕಾತಿ ಹಗರಣದಲ್ಲಿ ಕೆಲವು ಜನ ಶಾಮೀಲಾಗಿದ್ದು, ತನಿಖೆ ಜಾರಿಯಲ್ಲಿದೆ. ಏತನ್ಮಧ್ಯೆ, ಇನ್ನೂ 400 ಕ್ಕಿಂತ ಹೆಚ್ಚು ಪಿಎಸ್ ಐಗಳ ನೇಮಕಾತಿಗೆ (recruitment) ಇಲಾಖೆಯಿಂದ ಪ್ರಸ್ತಾವನೆ ಬಂದಿದೆ, ಅಂದರೆ ಸುಮಾರು ಸಾವಿರಕ್ಕೂ ಹೆಚ್ಚು ಪಿಎಸ್ ಗಳ ನೇಮಕಾತಿ ಮಾಡಬೇಕಾಗುತ್ತದೆ ಎಂದು ಪರಮೇಶ್ವರ್ ಹೇಳಿದರು. ಆದರೆ, ತನಿಖೆ ಪೂರ್ಣಗೊಳ್ಳದ ಹೊರತು ನೇಮಕಾತಿ ಪ್ರಕ್ರಿಯೆಯನ್ನು ಶುರುಮಾಡಲು ಬರೋದಿಲ್ಲ ಹಾಗಾಗಿ ತನಿಖೆ ಮುಗಿಯುವವರೆಗೆ ಕಾಯಲೇಬೇಕಾದ ಅನಿವಾರ್ಯ ಪರಿಸ್ಥಿತಿ ತಲೆದೋರಿದೆ ಎಂದು ಗೃಹ ಸಚಿವರು ಹೇಳಿದರು. ತನಿಖೆ ಮುಗಿಯುವ ಮೊದಲು ಪ್ರಕ್ರಿಯೆ ಶುರುಮಾಡಿದರೆ ಸೇವಾ ಜೇಷ್ಠ್ಯತೆಯ ಸಮಸ್ಯೆ ಉದ್ಭವಿಸುತ್ತದೆ, ಆದರೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರು ಆತಂಕಪಡುವ ಅಗತ್ಯವಿಲ್ಲ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.