ಪ್ರಿಯಾಂಕ್ ಖರ್ಗೆ ಹೇಳಿದ್ದು ಗಣನೆಗೆ ಬರಲ್ಲ, ಸಿಎಂ ಮತ್ತು ನಾನು ಹೇಳೋದು ಮಾತ್ರ ಅಧಿಕೃತ: ಜಿ ಪರಮೇಶ್ವರ್, ಗೃಹ ಸಚಿವ

Updated on: Mar 05, 2024 | 1:25 PM

ಮುಖ್ಯಮಂತ್ರಿ ಮತ್ತು ತಾನು ಅಧಿಕೃತ ಎಫ್ ಎಸ್ ಎಲ್ ವರದಿ ಬಂದ ಬಳಿಕ ಅದರ ಆಧಾರದ ಮೇಲೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೆವು ಮತ್ತು ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಹೇಳಿದರು. ಪೂರ್ತಿ ಘಟನೆಯಲ್ಲಿ ಪೊಲೀಸರಿಂದ ಕರ್ತವ್ಯಲೋಪ ಜರುಗಿದ್ದರೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರು: ರಾಜ್ಯಸಭೆಗೆ ಡಾ ಸಯ್ಯದ್ ನಾಸೀರ್ ಹುಸ್ಸೇನ್ ಆಯ್ಕೆಯಾದ ಸಂದರ್ಭದಲ್ಲಿ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದು ಈಗ ಸಾಬೀತಾಗಿದೆ ಮತ್ತು ಕೂಗಿದವರನ್ನು ಬಂಧಿಸಲಾಗಿದೆ. ಆದರೆ, ಎಫ್ ಎಸ್ ಎಲ್ ವರದಿ ಲಭ್ಯವಾಗುವ ಮೊದಲೇ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಯಾರೂ ಹಾಗೆ ಕೂಗಿಲ್ಲ, ಬಿಜೆಪಿ ನಾಯಕರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಮತ್ತು ದ್ವೇಷ ಬಿತ್ತುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದರು. ಖರ್ಗೆ ಮಾತಾಡಿದ್ದನ್ನು ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಗಮನಕ್ಕೆ ತಂದಾಗ ಅವರು ತಮ್ಮ ಸಂಪುಟ ಸಹೋದ್ಯೋಗಿಯ (cabinet colleague) ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇಂಥ ಸೂಕ್ಷ್ಮ ವಿಷಯಗಳಲ್ಲಿ ಬೇರೆ ಯಾವುದೇ ಸಚಿವ ಹೇಳುವುದು ಗಣನೆಗೆ ಬರಲ್ಲ, ಮುಖ್ಯಮಂತ್ರಿ, ಗೃಹ ಸಚಿವ ಮತ್ತು ಟಾಪ್ ಪೊಲೀಸ್ ಅಧಿಕಾರಿಗಳು ನೀಡುವ ಹೇಳಿಕೆಗಳು ಅಧಿಕೃತ ಅನಿಸಿಕೊಳ್ಳುತ್ತವೆ ಎಂದು ಹೇಳಿದರು. ಮುಖ್ಯಮಂತ್ರಿ ಮತ್ತು ತಾನು ಅಧಿಕೃತ ಎಫ್ ಎಸ್ ಎಲ್ ವರದಿ ಬಂದ ಬಳಿಕ ಅದರ ಆಧಾರದ ಮೇಲೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೆವು ಮತ್ತು ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಹೇಳಿದರು. ಪೂರ್ತಿ ಘಟನೆಯಲ್ಲಿ ಪೊಲೀಸರಿಂದ ಕರ್ತವ್ಯಲೋಪ ಜರುಗಿದ್ದರೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು: ಬಿಜೆಪಿ ಕಿಡಿ  

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More