AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನುಬಾಹಿರವಾಗಿ ಸೈಟು ಖರೀದಿಸಿ ದಕ್ಕಿಸಿಕೊಳ್ಳುವುದು ಕೇವಲ ಸಿಎಂಗೆ ಮಾತ್ರ ಸಾಧ್ಯ: ಸಿಟಿ ರವಿ

ಕಾನೂನುಬಾಹಿರವಾಗಿ ಸೈಟು ಖರೀದಿಸಿ ದಕ್ಕಿಸಿಕೊಳ್ಳುವುದು ಕೇವಲ ಸಿಎಂಗೆ ಮಾತ್ರ ಸಾಧ್ಯ: ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ
|

Updated on:Aug 27, 2024 | 9:49 PM

Share

ಸದನದಲ್ಲಿ ವಿರೋಧ ಪಕ್ಷದ ನಾಯಕರು ಮುಡಾ ಹಗರಣವನ್ನು ಎಳೆಎಳೆಯಾಗಿ ಬಿಚ್ಚಿ ಪ್ರಶ್ನೆಗಳನ್ನು ಕೇಳಲಾರಂಭಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುತ್ತರಾದರು, ಸದನದಿಂದ ಪಲಾಯನ ಮಾಡದ ಹೊರತು ಅವರ ಮುಂದೆ ಬೇರೆ ದಾರಿಯೇ ಉಳಿದಿರಲಿಲ್ಲ ಎಂದು ಸಿಟಿ ರವಿ ಗೇಲಿ ಮಾಡಿದರು.

ಬೆಂಗಳೂರು: ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಸೈಟುಗಳನ್ನು ಪಡೆದು ಅವುಗಳನ್ನು ದಕ್ಕಿಸಿಕೊಳ್ಳುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾತ್ರ ಸಾಧ್ಯ, 2004 ರಲ್ಲಿ ₹ 5.92 ಲಕ್ಷಗಳಿಗೆ ಖರೀದಿಸಿದ ಜಮೀನಿಗೆ ಇವತ್ತು ₹ 62 ಕೋಟಿ ಕೊಡಿ ಅಂತ ಜನಸಾಮಾನ್ಯರು ಕೇಳಲಾದೀತೆ ಎಂದು ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಸಿಎಂ ಪತ್ನಿ ಬರೆದ ಪತ್ರ ತಿರುಚಿದ್ರಾ ಅಧಿಕಾರಿಗಳು? ಅನುಮಾನಕ್ಕೆ ಇದೆ ಕಾರಣ

Published on: Aug 27, 2024 06:48 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More