AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Kumaraswamy; ಗ್ಯಾರಂಟಿಗಳ ಜಾರಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮಾತ್ರ ಹೇಳಿಕೆ ನೀಡಲು ಅರ್ಹರು: ಹೆಚ್ ಡಿ ಕುಮಾರಸ್ವಾಮಿ

HD Kumaraswamy; ಗ್ಯಾರಂಟಿಗಳ ಜಾರಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮಾತ್ರ ಹೇಳಿಕೆ ನೀಡಲು ಅರ್ಹರು: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 02, 2023 | 1:15 PM

ಸಿದ್ದರಾಮಯ್ಯ ರಾಜ್ಯದ ಅತಿದೊಡ್ಡ ಆರ್ಥಿಕ ತಜ್ಞರಾಗಿದ್ದಾರೆ, ಅದು ತಪ್ಪುವುದನ್ನು ಅವರು ನೋಡಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಗಿ ಹೇಳಿದರು.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿದ ಬಳಿಕ ತೀವ್ರ ಸ್ವರೂಪದ ಹತಾಷೆಗೊಳಗಾಗಿ ಕೋಪದಲ್ಲಿ ಹೇಳಿಕೆಗಳನ್ನು ನೀಡಲಾರಂಭಿಸಿದ್ದ ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕೊಂಚ ಚೇತರಿಸಿಕೊಂಡಂತೆ ಕಾಣುತ್ತಿದೆ. ನಗರದಲ್ಲಿಂದು ಟಿವಿ9 ಕನ್ನಡ ವರದಿಗಾರನೊಂದಿಗೆ ಅವರು ಬ್ಯಾಲನ್ಸ್ ಆಗಿ ಮಾತಾಡಿದರು. ಸರ್ಕಾರ ಜಾರಿಗೊಳಿಸಬೇಕಿರುವ 5 ಗ್ಯಾರಂಟಿಗಳ (5 guarantees) ಬಗ್ಗೆ ಸಿದ್ದರಾಮಯ್ಯ (Siddaramaiah) ಸಂಪುಟದ ಮಂತ್ರಿಗಳೆಲ್ಲ ತಾವೇ ಮುಖ್ಯಮಂತ್ರಿಗಳಂತೆ ಮಾತಾಡುತ್ತಿದ್ದಾರೆ, ಅವರ ಹೇಳಿಕೆಗಳಿಗೆ ಬೆಲೆ ನೀಡುವ ಅವಶ್ಯಕತೆಯಿಲ್ಲ ಎಂದು ಕುಮಾರಸ್ವಾಮಿಗಳು ಹೇಳಿದರು. ಜನರಿಗೆ 5 ಗ್ಯಾರಂಟಿಗಳನ್ನು ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಾಗಾಗಿ ಅವುಗಳನ್ನು ಜಾರಿಗೊಳಿಸುವ ಬಗ್ಗೆ ಈ ತ್ರಿಮೂರ್ತಿಗಳೇ ಉತ್ತರ ನೀಡಬೇಕು ಎಂದು ಅವರು ಹೇಳಿದರು. ಗ್ಯಾರಂಟಿಗಳಿಂದ ರಾಜ್ಯದ ಮೇಲೆ ಆರ್ಥಿಕ ಹೊರೆ ಬೀಳುವ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ, ಸಿದ್ದರಾಮಯ್ಯ ರಾಜ್ಯದ ಅತಿದೊಡ್ಡ ಆರ್ಥಿಕ ತಜ್ಞರಾಗಿದ್ದಾರೆ, ಅದು ತಪ್ಪುವುದನ್ನು ಅವರು ನೋಡಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ