HD Kumaraswamy; ಗ್ಯಾರಂಟಿಗಳ ಜಾರಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮಾತ್ರ ಹೇಳಿಕೆ ನೀಡಲು ಅರ್ಹರು: ಹೆಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ರಾಜ್ಯದ ಅತಿದೊಡ್ಡ ಆರ್ಥಿಕ ತಜ್ಞರಾಗಿದ್ದಾರೆ, ಅದು ತಪ್ಪುವುದನ್ನು ಅವರು ನೋಡಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಗಿ ಹೇಳಿದರು.

HD Kumaraswamy; ಗ್ಯಾರಂಟಿಗಳ ಜಾರಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮಾತ್ರ ಹೇಳಿಕೆ ನೀಡಲು ಅರ್ಹರು: ಹೆಚ್ ಡಿ ಕುಮಾರಸ್ವಾಮಿ
|

Updated on: Jun 02, 2023 | 1:15 PM

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿದ ಬಳಿಕ ತೀವ್ರ ಸ್ವರೂಪದ ಹತಾಷೆಗೊಳಗಾಗಿ ಕೋಪದಲ್ಲಿ ಹೇಳಿಕೆಗಳನ್ನು ನೀಡಲಾರಂಭಿಸಿದ್ದ ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕೊಂಚ ಚೇತರಿಸಿಕೊಂಡಂತೆ ಕಾಣುತ್ತಿದೆ. ನಗರದಲ್ಲಿಂದು ಟಿವಿ9 ಕನ್ನಡ ವರದಿಗಾರನೊಂದಿಗೆ ಅವರು ಬ್ಯಾಲನ್ಸ್ ಆಗಿ ಮಾತಾಡಿದರು. ಸರ್ಕಾರ ಜಾರಿಗೊಳಿಸಬೇಕಿರುವ 5 ಗ್ಯಾರಂಟಿಗಳ (5 guarantees) ಬಗ್ಗೆ ಸಿದ್ದರಾಮಯ್ಯ (Siddaramaiah) ಸಂಪುಟದ ಮಂತ್ರಿಗಳೆಲ್ಲ ತಾವೇ ಮುಖ್ಯಮಂತ್ರಿಗಳಂತೆ ಮಾತಾಡುತ್ತಿದ್ದಾರೆ, ಅವರ ಹೇಳಿಕೆಗಳಿಗೆ ಬೆಲೆ ನೀಡುವ ಅವಶ್ಯಕತೆಯಿಲ್ಲ ಎಂದು ಕುಮಾರಸ್ವಾಮಿಗಳು ಹೇಳಿದರು. ಜನರಿಗೆ 5 ಗ್ಯಾರಂಟಿಗಳನ್ನು ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಾಗಾಗಿ ಅವುಗಳನ್ನು ಜಾರಿಗೊಳಿಸುವ ಬಗ್ಗೆ ಈ ತ್ರಿಮೂರ್ತಿಗಳೇ ಉತ್ತರ ನೀಡಬೇಕು ಎಂದು ಅವರು ಹೇಳಿದರು. ಗ್ಯಾರಂಟಿಗಳಿಂದ ರಾಜ್ಯದ ಮೇಲೆ ಆರ್ಥಿಕ ಹೊರೆ ಬೀಳುವ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ, ಸಿದ್ದರಾಮಯ್ಯ ರಾಜ್ಯದ ಅತಿದೊಡ್ಡ ಆರ್ಥಿಕ ತಜ್ಞರಾಗಿದ್ದಾರೆ, ಅದು ತಪ್ಪುವುದನ್ನು ಅವರು ನೋಡಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ