ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳನ್ನು ಕರೆಸಿ ಮಾತಾಡುವ ಅಧಿಕಾರ ಪ್ರಧಾನಿ ಮೋದಿಗೆ ಮಾತ್ರ ಇದೆ, ಅವರ ಮಧ್ಯಸ್ಥಿಕೆ ಕೋರಿದ್ದೇವೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Sep 20, 2023 | 2:08 PM

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೂ ಒಂದು ಪತ್ರ ಬರೆದು ಅವರ ಮಧ್ಯಸ್ಥಿಕೆ ಕೋರಿರುವುದಾಗಿ ಹೇಳಿದ ಸಿದ್ದರಾಮಯ್ಯ ಎರಡೂ ರಾಜ್ಯಗಳ ನಾಯಕರನ್ನು ಕರೆಸಿ ಮಾತಾಡುವ ಅಧಿಕಾರ ಅವರಿಗೆ ಮಾತ್ರ ಇರುವುದರಿಂದ ಅವರು ಸಭೆ ನಡೆಸಬೇಕೆಂದು ಮನವಿ ಮಾಡಿದ್ದೇವೆ ಎಂದರು. ಪ್ರಾಧಿಕಾರದ ಆದೇಶ ವಿರುದ್ಧ ಮತ್ತೊಮ್ಮೆ ಸುಪ್ರೀಮ್ ಕೋರ್ಟ್ ಮೊರೆ ಹೋಗುವ ಯೋಚನೆಯೂ ತಮ್ಮ ಸರ್ಕಾರಕ್ಕಿದೆ ಎಂದು ಸಿದ್ದರಾಮಯ್ಯ ಹೇಳಿದರು.

ದೆಹಲಿ: ತಮಿಳುನಾಡುಗೆ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶದಿಂದ ರಾಜ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಷ್ಟ್ರದ ರಾಜಧಾನಿಯ ಖಾಸಗಿ ಹೋಟೆಲೊಂದರಲ್ಲಿ ಕರ್ನಾಟಕ ಸಂಸದರ ಸಭೆಯನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಪತ್ರಿಕಾ ಗೋಷ್ಟಿಯಲ್ಲಿ ಮಾತಾಡಿದರು. ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ವಿವರಿಸಿದ ಸಿದ್ದರಾಮಯ್ಯ, ನಿನ್ನೆ ರಾತ್ರಿ ಶಿವಕುಮಾರ್ ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜೊತೆ ಮಾತಾಡಿ ಕೇಂದ್ರ ಜಲಸಂಪನ್ಮೂಲ ಸಚಿವರ ಜೊತೆ ಒಂದು ಸಭೆ ಏರ್ಪಡಿಸುವಂತೆ ಮನವಿ ಮಾಡಿದ್ದರು ಮತ್ತು ಜೋಶಿ ಇಂದು ಸಾಯಂಕಾಲ 4.30 ಕ್ಕೆ ಅದರ ವ್ಯವಸ್ಥೆ ಮಾಡಿದ್ದಾರೆ ಎಂದು ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೂ (PM Narendra Modi) ಒಂದು ಪತ್ರ ಬರೆದು ಅವರ ಮಧ್ಯಸ್ಥಿಕೆ ಕೋರಿರುವುದಾಗಿ ಹೇಳಿದ ಸಿದ್ದರಾಮಯ್ಯ ಎರಡೂ ರಾಜ್ಯಗಳ ನಾಯಕರನ್ನು ಕರೆಸಿ ಮಾತಾಡುವ ಅಧಿಕಾರ ಅವರಿಗೆ ಮಾತ್ರ ಇರುವುದರಿಂದ ಅವರು ಸಭೆ ನಡೆಸಬೇಕೆಂದು ಮನವಿ ಮಾಡಿದ್ದೇವೆ ಎಂದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ವಿರುದ್ಧ ಮತ್ತೊಮ್ಮೆ ಸುಪ್ರೀಮ್ ಕೋರ್ಟ್ ಮೊರೆ ಹೋಗುವ ಯೋಚನೆಯೂ ತಮ್ಮ ಸರ್ಕಾರಕ್ಕಿದೆ ಎಂದು ಸಿದ್ದರಾಮಯ್ಯ ಹೇಳಿದರು.
ತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.