Vijaya Sankalp Yatre; ಬಿಜೆಪಿ ಶಾಸಕರ ಕ್ಷೇತ್ರಗಳಲ್ಲಿ ಮಾತ್ರ ಸರ್ಕಾರದ ಯೋಜನೆಗಳಿಂದ ಜನಕ್ಕೆ ಉಪಯೋಗವಾಗುತ್ತಿದೆ: ತೇಜಸ್ವೀ ಸೂರ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Mar 22, 2023 | 12:22 PM

ಕಾಂಗ್ರೆಸ್ ಶಾಸಕರಿರುವ ಪಕ್ಕದ ಕಂಪ್ಲಿಯಲ್ಲಿ ಯಾಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿರುವ ಹಲವಾರು ಯೋಜನೆಗಳು ಜಾರಿಗೆ ಬಂದಿಲ್ಲ ಎಂದು ಸಂಸದರು ಪ್ರಶ್ನಿಸಿದರು.

ಬಳ್ಳಾರಿ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ (Vijaya Sankalp Yatre) ಭಾಗವಾಗಿ ಇಂದು ಬಳ್ಳಾರಿಯಲ್ಲಿ ಸಮಾವೇಶವೊಂದನ್ನು ಉದ್ದೇಶಿಸಿ ಮಾತಾಡಿದ ಸಂಸದ ತೇಜಸ್ವೀ ಸೂರ್ಯ (Tejasvi Surya) ಜಿಲ್ಲೆಯ ಕಾಂಗ್ರೆಸ್ ಶಾಸಕರ ಮೇಲೆ ಹರಿಹಾಯ್ದರು. ಗಂಗಾವತಿ (Gangavati) ಕ್ಷೇತ್ರದಲ್ಲಿ ಆಯಷ್ಮಾನ್ ಭಾರತ್ ಯೋಜನೆ ಅಡಿ ಸುಮಾರು 24, 500 ಫಲಾನುಭವಿಗಳಿದ್ದಾರೆ. ಜಲಜೀವನ್ ಮಿಶನ್ ಯೋಜನೆ ಅಡಿ ಸಾವಿರಾರು ಮನೆಗಳಿಗೆ ನೀರಿನ ಸೌಕರ್ಯ ಒದಗಿಸಲಾಗಿದೆ. ಆದರೆ ಕಾಂಗ್ರೆಸ್ ಶಾಸಕರಿರುವ ಪಕ್ಕದ ಕಂಪ್ಲಿಯಲ್ಲಿ ಯಾಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿರುವ ಹಲವಾರು ಯೋಜನೆಗಳು ಜಾರಿಗೆ ಬಂದಿಲ್ಲ ಎಂದು ಅವರು ಪ್ರಶ್ನಿಸಿದರು. ಕಾಂಗ್ರೆಸ್ ಶಾಸಕರಿಗೆ ತಮ್ಮ ಕ್ಷೇತ್ರದ ಜನರು ನೆಮ್ಮದಿಯಿಂದ ಬದುಕುವುದು ಬೇಕಿಲ್ಲ ಎಂದು ಸಂಸದರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.