Bengaluru Bandh: ನಗರದ ಐಕಾನಿಕ್ ಕೆ ಆರ್ ಮಾರ್ಕೆಟ್ ನಲ್ಲಿ ವ್ಯಾಪಾರಸ್ಥರಿದ್ದಾರೆ, ಆದರೆ ಕೊಳ್ಳುವವರಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Sep 26, 2023 | 12:22 PM

Bengaluru Bandh: ಕೆಲ ವ್ಯಾಪಾರಿಗಳು ಎರಡೆರಡು ಬಂದ್ ಗಳಿಗೆ ಕರೆ ನೀಡಿರುವುದರಿಂದ ಗೊಂದಲದಲ್ಲಿದ್ದಾರೆ. ತರಕಾರಿ ಕೊಳ್ಳಲು ಜನ ಬರುತ್ತಿಲ್ಲ ವ್ಯಾಪಾರ ತುಂಬಾ ಡಲ್ ಆಗಿದೆ ಅಂತ ಒಬ್ಬ ವ್ಯಾಪಾರಿ ಹೇಳುತ್ತಾರೆ. ಒಂದೆರಡು ಗಂಟೆಗಳ ಬಳಿಕ ತಾವು ಸಹ ಅಂಗಡಿಗಳನ್ನು ಮುಚ್ಚಿಕೊಂಡು ಹೋಗುತ್ತೇವೆ ಅಂತ ಅವರು ಹೇಳುವ ವ್ಯಾಪಾರಸ್ಥರಿಗೆ ಬಂದ್ ಗೆ ಯಾಕೆ ಕರೆ ನೀಡಲಾಗಿದೆ ಅಂತ ಸ್ಪಷ್ಟವಾಗಿ ಗೊತ್ತಿಲ್ಲ.

ಬೆಂಗಳೂರು: ಕಾವೇರಿ ವಿವಾದ ಹಿನ್ನೆಲೆಯಲ್ಲಿ ರೈತ ಮತ್ತು ವಿವಿಧ ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್ ಕರೆಯಿಂದಾಗಿ (Bengaluru Bandh) ಸದಾ ಗಿಜಿಗಿಡುವ ಕೆಆರ್ ಮಾರ್ಕೆಟ್ ನಲ್ಲಿ (KR Market) ವ್ಯಾಪಾರಸ್ಥರಿದ್ದಾರೆ ಅದರೆ ಗ್ರಾಹಕರು (buyers) ಬಹಳ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ್ತಿ ಮಾರ್ಕೆಟ್ ವ್ಯಾಪಾರಸ್ಥರೊಂದಿಗೆ ಬೆಳಗಿನ ಸಮಯದಲ್ಲಿ ಮಾತಾಡಿದ್ದಾರೆ. ತರಕಾರಿ ಅಗತ್ಯ ವಸ್ತುಗಳ ಕೆಟೆಗಿರಿಯಲ್ಲಿ ಎಣಿಕೆಯಾಗುವುದರಿಂದ ಅಂಗಡಿಗಳನ್ನು ಓಪನ್ ಮಾಡಿದ್ದಾಗಿ ಅವರು ಹೇಳುತ್ತಾರೆ. ಕೆಲವರು ಎರಡೆರಡು ಬಂದ್ ಗಳಿಗೆ ಕರೆ ನೀಡಿರುವುದರಿಂದ ಗೊಂದಲದಲ್ಲಿದ್ದಾರೆ. ತರಕಾರಿ ಕೊಳ್ಳಲು ಜನ ಬರುತ್ತಿಲ್ಲ ವ್ಯಾಪಾರ ತುಂಬಾ ಡಲ್ ಆಗಿದೆ ಅಂತ ಒಬ್ಬ ವ್ಯಾಪಾರಿ ಹೇಳುತ್ತಾರೆ. ಒಂದೆರಡು ಗಂಟೆಗಳ ಬಳಿಕ ತಾವು ಸಹ ಅಂಗಡಿಗಳನ್ನು ಮುಚ್ಚಿಕೊಂಡು ಹೋಗುತ್ತೇವೆ ಅಂತ ಅವರು ಹೇಳುವ ವ್ಯಾಪಾರಸ್ಥರಿಗೆ ಬಂದ್ ಗೆ ಯಾಕೆ ಕರೆ ನೀಡಲಾಗಿದೆ ಅಂತ ಸ್ಪಷ್ಟವಾಗಿ ಗೊತ್ತಿಲ್ಲ. ಅದೇನೋ ನೀರಿಗಾಗಿ ಅಂತ ಒಬ್ಬರು ಹೇಳಿದರೆ ಮತ್ತೊಬ್ಬರು ಅಯ್ಯೋ ಅದೆಲ್ಲ ಗೊತ್ತಿಲ್ಲ ಮೇಡಂ ಅನ್ನುತ್ತಾರೆ. ಅದೇನೇ ಇರಲಿ, ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಕೆ ಆರ್ ಮಾರ್ಕೆಟ್ ನಲ್ಲಿ ವ್ಯಾಪಾರಸ್ಥರಿದ್ದಾರೆ, ಗ್ರಾಹಕರಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 26, 2023 11:31 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.