ಅಪರೇಶನ್ ಹಸ್ತ ಡಿಕೆ ಶಿವಕುಮಾರ್ ಆಡುತ್ತಿರುವ ಒಂದು ನಾಟಕ, ಬೇರೇನೂ ಅಲ್ಲ: ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ 20-25 ಹಿರಿಯ ಕಾಂಗ್ರೆಸ್ ಶಾಸಕರು, ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಸಭೆ ನಡೆಸಿದ್ದರು. ಅದನ್ನು ಪಕ್ಷಕ್ಕಾದ ಅವಮಾನ ಎಂದು ಪರಿಗಣಿಸಿದ ಮಹಾನಾಯಕ ಅದನ್ನು ಜನರಿಂದ ಮತ್ತು ವಿರೋಧ ಪಕ್ಷಗಳಿಂದ ಮುಚ್ಚಿಡಲು ಅಪರೇಷನ್ ಹಸ್ತದ ನಾಟಕ ನಡೆಸುತ್ತಿದ್ದಾರೆ. ಅಸಲಿಗೆ ಅದರಲ್ಲಿಅಂಥದ್ದೇನೂ ಇಲ್ಲ ಎಂದು ರಮೇಶ್ ಹೇಳಿದರು

ಅಪರೇಶನ್ ಹಸ್ತ ಡಿಕೆ ಶಿವಕುಮಾರ್ ಆಡುತ್ತಿರುವ ಒಂದು ನಾಟಕ, ಬೇರೇನೂ ಅಲ್ಲ: ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ
|

Updated on:Sep 04, 2023 | 6:07 PM

ಬೆಳಗಾವಿ: ವಿಧಾನ ಸಭಾ ಚುನಾವಣೆಯ (Assembly Polls) ಬಳಿಕ ಹೆಚ್ಚು ಕಡಿಮೆ ನಾಪತ್ತೆಯಂತಾಗಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಇಂದು ಅಥಣಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದರು. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರನ್ನು ಈಗಲೂ ಮಹಾನಾಯಕನೆಂದೇ ವ್ಯಂಗ್ಯವಾಗಿ ಸಂಬೋಧಿಸುವ ಜಾರಕಿಹೊಳಿ, ಶಿವಕುಮಾರ್ ಆಪರೇಶನ್ ಹಸ್ತ ನಡೆಸುತ್ತಿರುವುದಕ್ಕೆ ಮೂಲ ಕಾರಣ ಏನು ಅಂತ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ 20-25 ಹಿರಿಯ ಕಾಂಗ್ರೆಸ್ ಶಾಸಕರು, ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಸಭೆ ನಡೆಸಿದ್ದರು. ಅದನ್ನು ಪಕ್ಷಕ್ಕಾದ ಅವಮಾನ ಎಂದು ಪರಿಗಣಿಸಿದ ಮಹಾನಾಯಕ ಅದನ್ನು ಜನರಿಂದ ಮತ್ತು ವಿರೋಧ ಪಕ್ಷಗಳಿಂದ ಮುಚ್ಚಿಡಲು ಅಪರೇಷನ್ ಹಸ್ತದ ನಾಟಕ ನಡೆಸುತ್ತಿದ್ದಾರೆ. ಅಸಲಿಗೆ ಅದರಲ್ಲಿಅಂಥದ್ದೇನೂ ಇಲ್ಲ, ಯಾವುದೇ ಬಿಜೆಪಿ ಶಾಸಕ ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Mon, 4 September 23

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ