ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು

Edited By:

Updated on: May 07, 2025 | 2:10 PM

ಬಾಗಲಕೋಟೆಯ ಮಾಜಿ ಯೋಧರು ಪಾಕಿಸ್ತಾನದ ಮೇಲೆ ನಡೆದ ಆಪರೇಷನ್ ಸಿಂಧೂರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಪಾಕ್ ಉಗ್ರರನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ಎಲ್ಲಾ ಭಾರತೀಯರಿಗೆ ಸೇನಾ ಮಾದರಿ ತರಬೇತಿ ನೀಡುವಂತೆ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈಗಲೂ‌ ನಾವು ಯುದ್ದಕ್ಕೆ ಸಿದ್ದ ಎಂದು ಹೇಳಿದ್ದಾರೆ.

ಬಾಗಲಕೋಟೆ, ಮೇ 07: ಪಾಕ್‌ ಮೇಲೆ ಭಾರತದಿಂದ ಆಪರೇಷನ್ ಸಿಂಧೂರ್​ ಅಸ್ತ್ರ ಪ್ರಯೋಗಿಸಲಾಗಿದೆ. ಆ ಮೂಲಕ ಪಹಲ್ಗಾಮ್​ (Pahalgam) ಉಗ್ರರ ದಾಳಿ ಪ್ರತೀಕಾರ ತೀರಿಸಿಕೊಳ್ಳಲಾಗಿದೆ. ಸದ್ಯ ಎಲ್ಲೆಡೆ ಸಂಭ್ರಮಾಚರಣೆ ಜೋರಾಗಿದ್ದು, ಇತ್ತ ಜಿಲ್ಲೆಯಲ್ಲಿ ಮಾಜಿ ಯೋಧರಿಂದ ಭಾರತ ಸರಕಾರ ಹಾಗೂ ಸೇನೆಗೆ ಅಭಿನಂದನೆ ಸಲ್ಲಿಸಲಾಗಿದೆ. ಇಂತಹ ಅವಕಾಶಕ್ಕಾಗಿ ನಾವು ಕಾಯುತ್ತಿದ್ದೆವು. ಇದೊಂದು ಖುಷಿಯ ವಿಚಾರ. ಈಗಲೂ‌ ನಾವೆಲ್ಲಾ ಯುದ್ದಕ್ಕೆ ಸಿದ್ದ. ಯಾವುದೇ ಕ್ಷಣದಲ್ಲಿ‌ ನಮಗೆ ಬುಲಾವ್ ಬರಲಿ, ಆಯುಧ ಹಿಡಿದು ಯುದ್ದಕ್ಕೆ ನಾವು ಸಿದ್ದ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More