Karnataka New CM: ಶಾಸಕರ ಅಭಿಪ್ರಾಯಗಳನ್ನು ಹೈಕಮಾಂಡ್​ಗೆ ಬರೆದು ಕಳಿಸಿದ್ದೇವೆ, ನಿರ್ಣಯ ಅವರಿಗೆ ಬಿಟ್ಟಿದ್ದು: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ Edited By:

Updated on: May 15, 2023 | 11:16 AM

ಶಿವಕುಮಾರ್ ಅವರನ್ನು ಸಿಎಲ್​ಪಿಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ಪ್ರಶ್ನಿಸಿದಾಗ, ಚುಟುಕಾಗಿ ಒನ್ ಲೈನ್ ರೆಸ್ಯೂಲಷನ್ ಅನ್ನು ಸಭೆಯಲ್ಲಿ ಅಂಗೀಕರಿಸಿದ್ದಾಗಿ ಹೇಳಿದರು.

ಬೆಂಗಳೂರು: ನಿನ್ನೆ ನಗರದ ಖಾಸಗಿ ಸಭೆಯೊಂದರಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (CLP meeting) ನಡೆಯಿತು. ಪಕ್ಷದಿಂದ ಆಯ್ಕೆಯಾದವರೆಲ್ಲರೂ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಏನು ನಡೆಯಿತು ಅನ್ನೋದು ಹೊರಗಿನವರಿಗೆ ಗೊತ್ತಾಗಲಿಲ್ಲ. ಮಾಧ್ಯಮ ಪ್ರತಿನಿಧಿಗಳು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಲ್ಪಿಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ಪ್ರಶ್ನಿಸಿದಾಗ, ಅವರು ಚುಟುಕಾಗಿ ಒನ್ ಲೈನ್ ರೆಸ್ಯೂಲಷನ್ ಅನ್ನು (One Line Resolution) ಸಭೆಯಲ್ಲಿ ಅಂಗೀಕರಿಸಿದ್ದಾಗಿ ಹೇಳಿದರು. ಮುಖ್ಯಮಂತ್ರಿ ಆಯ್ಕೆ ವಿಷಯಕ್ಕೆ ಸಂಬಂಧಿಸಿದಂತೆ ಅವರು, ಶಾಸಕರ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ ಕಳಿಸಲಾಗಿದೆ, ಅವರು ನಿರ್ಣಯ ತೆಗೆದುಕೊಳ್ಳುತ್ತಾರೆ ಅಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 15, 2023 10:15 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.