AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIR ಕುರಿತು ಚರ್ಚೆ ನಡೆಸುವುದಿಲ್ಲ ಎಂದಿಲ್ಲ, ಪ್ರತಿಕ್ರಿಯಿಸಲು ಸಮಯ ಕೊಡಿ; ರಾಜ್ಯಸಭೆಯಲ್ಲಿ ಸಚಿವ ಕಿರಣ್ ರಿಜಿಜು

SIR ಕುರಿತು ಚರ್ಚೆ ನಡೆಸುವುದಿಲ್ಲ ಎಂದಿಲ್ಲ, ಪ್ರತಿಕ್ರಿಯಿಸಲು ಸಮಯ ಕೊಡಿ; ರಾಜ್ಯಸಭೆಯಲ್ಲಿ ಸಚಿವ ಕಿರಣ್ ರಿಜಿಜು

ಸುಷ್ಮಾ ಚಕ್ರೆ
|

Updated on: Dec 01, 2025 | 7:40 PM

Share

SIR ಪ್ರಕ್ರಿಯೆಯನ್ನು ಕೈಗೊಳ್ಳುವ ಭಾರತದ ಚುನಾವಣಾ ಆಯೋಗದ ನಿರ್ಧಾರವು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳು ಅದರ ಬಗ್ಗೆ ನಿರಂತರವಾಗಿ ಉನ್ನತ ಚುನಾವಣಾ ಸಂಸ್ಥೆಯ ಮೇಲೆ ದಾಳಿ ಮಾಡುತ್ತಿವೆ. ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ವಿರೋಧ ಪಕ್ಷಗಳು ಈ ಪ್ರಕ್ರಿಯೆಯನ್ನು ಚರ್ಚಿಸಲು ಬಯಸುತ್ತವೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ತಿಳಿಸಿದೆ.

ನವದೆಹಲಿ, ಡಿಸೆಂಬರ್ 1: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಚರ್ಚೆ ನಡೆಸಬೇಕೆಂಬ ವಿರೋಧ ಪಕ್ಷದ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ಆ ಪ್ರಸ್ತಾವನೆ ಪರಿಗಣನೆಯಲ್ಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನದಂದು ರಾಜ್ಯಸಭೆಯಲ್ಲಿ ಮಾತನಾಡುತ್ತಾ ಸಚಿವ ಕಿರಣ್ ರಿಜಿಜು ಈ ಹೇಳಿಕೆ ನೀಡಿದ್ದಾರೆ.

“ವಿರೋಧ ಪಕ್ಷಗಳು ನಿನ್ನೆ ಸರ್ವಪಕ್ಷ ಸಭೆಯಲ್ಲಿ ಅಥವಾ ಇಂದು ತಂದ ಯಾವುದೇ ವಿಷಯವನ್ನು ನಾವು ನಿರ್ಲಕ್ಷ್ಯಿಸುತ್ತಿಲ್ಲ. ಅದು ಸರ್ಕಾರದ ಪರಿಗಣನೆಯಲ್ಲಿದೆ. ನೀವು ಅದನ್ನು ಇಂದೇ ಕೈಗೆತ್ತಿಕೊಳ್ಳಬೇಕು ಎಂಬ ಷರತ್ತನ್ನು ಹಾಕಿದರೆ ಅದು ಕಷ್ಟವಾಗುತ್ತದೆ” ಎಂದು ಹೇಳಿದ ಕೇಂದ್ರ ಸಚಿವ ಕಿರಣ್ ರಿಜಿಜು ಸರ್ಕಾರಕ್ಕೆ ಪ್ರತಿಕ್ರಿಯಿಸಲು ಸ್ವಲ್ಪ ಸಮಯ ನೀಡುವಂತೆ ವಿರೋಧ ಪಕ್ಷಗಳನ್ನು ಒತ್ತಾಯಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ