ಕಲಬುರಗಿ, ನ.21: ನಾವು ಬೇಡ ಅಂದರೂ ಕಾಂಗ್ರೆಸ್ಸಿಗರೇ ಬಹಳಷ್ಟು ಅಸ್ತ್ರ ಕೊಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ (R Ashoka) ಹೇಳಿದರು. ಕಲಬುರಗಿ(Kalaburagi)ಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ ಆಪರೇಷನ್ ಕಮಲದ ಅವಶ್ಯಕತೆ ನಮಗಿಲ್ಲ, ಅವರೇ ಕುಸಿದು ಬಿಳುತ್ತಿದ್ದಾರೆ ಎಂದರು. ಇದೇ ವೇಳೆ ಮಾತನಾಡಿದ ಅವರು‘ಸುವರ್ಣಸೌಧದ ಸಾರ್ವಕರ್ ಫೋಟೋ ತೆಗೆಯುತ್ತೇವೆ ಎಂದಿದ್ದಾರೆ. ಇದು ಸಾರ್ವಕರ್ಗೆ ಮಾಡುತ್ತಿರುವ ಅಪಮಾನ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕೊಲೆ, ಸುಲಿಗೆ ಜಾಸ್ತಿಯಾಗಿದೆ. ರಾಜ್ಯದಲ್ಲಿ ಟಿಪ್ಪು ಸಂಸ್ಕೃತಿ ಇದೆ ಎಂದು ಕಿಡಿಕಾರಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ