AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗಳಲ್ಲಿ ಎದುರಾಳಿ ಪಕ್ಷದವರು ಟಾರ್ಗೆಟ್ ಮಾಡೋದು ಸ್ವಾಭಾವಿಕ: ಡಿಕೆ ಸುರೇಶ್, ಸಂಸದ

ಚುನಾವಣೆಗಳಲ್ಲಿ ಎದುರಾಳಿ ಪಕ್ಷದವರು ಟಾರ್ಗೆಟ್ ಮಾಡೋದು ಸ್ವಾಭಾವಿಕ: ಡಿಕೆ ಸುರೇಶ್, ಸಂಸದ

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 07, 2024 | 4:47 PM

Share

ಬಿಜೆಪಿ ಮತ್ತು ಜೆಡಿಎಸ್ ನಡುವೆ ಏರ್ಪಟ್ಟಿರುವ ಮೈತ್ರಿಯನ್ನು ಗೇಲಿ ಮಾಡಿದ ಸುರೇಶ್ ಅದು ಮೈತ್ರಿಯೋ ಅಥವಾ ಒಬ್ಬರ ಕಾಲು ಮತ್ತೊಬ್ಬರ ಎಳೆಯುವುದಕ್ಕೆ ಮಾಡಿಕೊಂಡಿರುವ ಒಪ್ಪಂದವೋ ಗೊತ್ತಾಗುತ್ತಿಲ್ಲ ಆದರೆ ಚುನಾವಣೆಯಲ್ಲಿ ಅವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ರಾಮನಗರ: ಹನಕೆರೆ ಬಳಿ ಅಂಡರ್ ಪಾಸ್ ಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಾಸಕ ರವಿ ಗಣಿಗ (Ravi Ganiga) ಅವರಿಗೆ ಸಾಥ್ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಂಸದ ಡಿಕೆ ಸುರೇಶ್ (DK Suresh), ಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha polls) ತಾನು ಎಲ್ಲಿಂದ ಸ್ಪರ್ಧಿಸಬೇಕೆಂದು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ, ತಮ್ಮದು ಒಂದು ರಾಷ್ಟ್ರೀಯ ಪಕ್ಷ ಎಂದರು. ಸಂಸತ್ತಿನಲ್ಲಿ ಸುರೇಶ್ ಕಾಂಗ್ರೆಸ್ ಪಕ್ಷದ ಏಕೈಕ ಪ್ರತಿನಿಧಿಯಾಗಿರುವುದರಿಂದ ಟಾರ್ಗೆಟ್ ಮಾಡಲಾಗುತ್ತಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂಸದ, ಚುನಾವಣೆಯಲ್ಲಿ ಟಾರ್ಗೆಟ್ ಮಾಡುವುದು ಸ್ವಾಭಾವಿಕ ಎಂದರು. ಬಿಜೆಪಿ ಮತ್ತು ಜೆಡಿಎಸ್ ನಡುವೆ ಏರ್ಪಟ್ಟಿರುವ ಮೈತ್ರಿಯನ್ನು ಗೇಲಿ ಮಾಡಿದ ಸುರೇಶ್ ಅದು ಮೈತ್ರಿಯೋ ಅಥವಾ ಒಬ್ಬರ ಕಾಲು ಮತ್ತೊಬ್ಬರ ಎಳೆಯುವುದಕ್ಕೆ ಮಾಡಿಕೊಂಡಿರುವ ಒಪ್ಪಂದವೋ ಗೊತ್ತಾಗುತ್ತಿಲ್ಲ ಆದರೆ ಚುನಾವಣೆಯಲ್ಲಿ ಅವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಹೈಕಮಾಂಡ್ ಬೇರೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೇಳಿದರೆ ಮಾಡುತ್ತೀರಾ ಎಂದಾಗ ಸುರೇಶ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ ಮತ್ತು ಕಾರ್ಯಕರ್ತರು ತನ್ನನ್ನು ಇದೇ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರು ಗ್ರಾಮಾಂತರಕ್ಕೆ ಡಿಕೆ ಸುರೇಶ್ ವಿರುದ್ಧ ಬಿಜೆಪಿಯಿಂದ ಯಾರು? ಕೆಲ ಅಚ್ಚರಿ ಸಂಗತಿ ಬಿಚ್ಚಿಟ್ಟ ಯೋಗೇಶ್ವರ್

Published on: Mar 07, 2024 04:45 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More