ನೆಲಮಂಗಲದ ಬಳಿ ಆರೆಂಜ್ ತುಂಬಿದ ಲಾರಿ ಪಲ್ಟಿ: ಲಕ್ಷಾಂತರ ರೂ ಮೌಲ್ಯದ ಹಣ್ಣುಗಳು ಮಣ್ಣುಪಾಲು
ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ. ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಈ ಲಾರಿಯ ಅಪಘಾತದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಘಟನೆಯಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿ, ಟ್ರಾಫಿಕ್ ಉಂಟಾಗಿದೆ.
ಬೆಂಗಳೂರು, ಫೆ.12: ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ.ಈ ಲಾರಿಯೂ ಮುಂಬೈನಿಂದ ಬೆಂಗಳೂರು ನಗರಕ್ಕೆ ತೆರಳುತ್ತಿದ್ದ ಈ ಅಪಘಾತ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಘಟನೆಯು ರಾಷ್ಟ್ರೀಯ ಹೆದ್ದಾರಿ 48 ರ ಮೇಲೆ ನಡೆದಿದ್ದು, ಲಾರಿ ಚಾಲಕನು ವಾಹನದ ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಭಾರೀ ಪ್ರಮಾಣದ ಆರೆಂಜ್ ಹಣ್ಣುಗಳು ರಸ್ತೆಯ ಮೇಲೆ ಚೆಲ್ಲಿದ್ದರಿಂದ, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಯಿತು. ಇದರಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ನಿಧಾನವಾಗಿ ಸಾಗುವಂತಾಯಿತು. ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
