ಶಿವಕುಮಾರ್ ಆಯೋಜಿಸಿದ್ದ ಡಿನ್ನರ್ ಪಾರ್ಟಿಯಲ್ಲಿ ಪರಮೇಶ್ವರ್ ಬಿಟ್ಟು ಎಲ್ಲರೂ ಭಾಗಿಯಾಗಿದ್ದರು: ಎಂಬಿ ಪಾಟೀಲ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2025 | 1:04 PM

ಗೃಹ ಸಚಿವ ಜಿ ಪರಮೇಶ್ವರ್ ಅವರೊಬ್ಬರನ್ನು ಹೊರತುಪಡಿಸಿ ಉಳಿದೆಲ್ಲ ಶಾಸಕರು ಮತ್ತು ಮಂತ್ರಿಗಳು ಡಿನ್ನರ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು, ಪರಮೇಶ್ವರ್ ಅವರು ಹತ್ತಿರದ ಸಂಬಂಧಿಯೊಬ್ಬರು ಮರಣ ಹೊಂದಿದ್ದ ಕಾರಣ ಭಾಗವಹಿಸಲಾಗಲ್ಲ ಎಂದು ಮೊದಲೇ ಹೇಳಿದ್ದರು, ಔತಣಕೂಟ ಏರ್ಪಡಿಸುವುದು ಕಾಂಗ್ರೆಸ್ ಮಂತ್ರಿಗಳಿಗೆ ಹೊಸತೇನಲ್ಲ ಎಂದು ಪಾಟೀಲ್ ಹೇಳಿದರು.

ವಿಜಯಪುರ, 15 ಮಾರ್ಚ್: ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಔತಣಕೂಟವನ್ನೇರ್ಪಡಿಸಿದ್ದರು, ಅದಕ್ಕೆ ವಿಪರೀತ ಅರ್ಥ ಕಲ್ಲಿಸುವುದು ಬೇಡ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು. ಕೂಟದಲ್ಲಿ ಸತೀಶ್ ಜಾರಿಕಿಹೊಳಿ, ಕೆಎನ್ ರಾಜಣ್ಣ, ತಾನು ಮತ್ತು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗವಹಿಸಿದ್ದರು ಎಂದು ಪಾಟೀಲ್ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಈ ಹಿಂದಿನ ಬಿಜೆಪಿ ಸರ್ಕಾರದ ತೀರ್ಮಾನದಂತೆ ಜಿಂದಾಲ್​ಗೆ ಭೂಮಿ ನೀಡಲಾಗಿದೆ: ಎಂಬಿ ಪಾಟೀಲ್ ಸ್ಪಷ್ಟನೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.