Assembly Polls | ನಮಗೆ ಕೇವಲ ಕಾಂಗ್ರೆಸ್ ಪಕ್ಷದ ಮಾತ್ರ ಯೋಚನೆ; ಬೇರೆ ಪಾರ್ಟಿ, ಅಭ್ಯರ್ಥಿಗಳನ್ನು ಕುರಿತು ಯೋಚಿಸುವುದಿಲ್ಲ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 02, 2023 | 1:10 PM

ಕಾಂಗ್ರೆಸ್ ಜನರಿಗೆ ಹತ್ತಿರವಿರುವ, ಜನರೊಂದಿಗೆ ಬೆರೆಯುವ ಮತ್ತು ಜನರ ಸೇವೆ ಮಾಡುತ್ತಾ ಅವರ ಬದುಕನ್ನು ಹಸನಾಗಿಸುವ ಪಕ್ಷ, ತಾವು ತಮ್ಮ ಪಕ್ಷದ ಬಗ್ಗೆ ಮಾತ್ರ ಯೋಚಿಸುವುದಾಗಿ ಶಿವಕುಮಾರ್ ಹೇಳಿದರು.

ಬಳ್ಳಾರಿ ಕ್ಷೇತ್ರದಿಂದ ಕೆಆರ್ ಪಿಪಿ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿಯವರು (Gali Janardhan Reddy) ತಮ್ಮ ಧರ್ಮಪತ್ನಿ ಅರುಣ ಲಕ್ಷ್ಮಿಯವರನ್ನು ಸ್ಪರ್ಧೆಗೆ ಇಳಿಸುತ್ತಿರುವುದರಿಂದ ಬಿಜೆಪಿ ಆಭ್ಯರ್ಥಿಯ ವೋಟುಗಳು ವಿಭಜಿಸುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಲಿದೆಯೇ ಅಂತ ಕೇಳಿದಾಗ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು, ಎಲ್ಲ ಪಕ್ಷಗಳು ತಮ್ಮ ತತ್ವಸಿದ್ಧಾಂತಗಳ ಮೇಲೆ ಹೋರಾಡುತ್ತವೆ, ತಮ್ಮದು ಬಹು ದೊಡ್ಡ ಇತಿಹಾಸವಿರುವ ಪಕ್ಷ, ತಾವು ತಮ್ಮ ಸಿದ್ಧಾಂತಗಳ (ideology) ಮೇಲೆ ಹೋರಾಡುವುದಾಗಿ ಹೇಳಿದರು. ಕಾಂಗ್ರೆಸ್ ಜನರಿಗೆ ಹತ್ತಿರವಿರುವ, ಜನರೊಂದಿಗೆ ಬೆರೆಯುವ ಮತ್ತು ಜನರ ಸೇವೆ ಮಾಡುತ್ತಾ ಅವರ ಬದುಕನ್ನು ಹಸನಾಗಿಸುವ ಪಕ್ಷ, ತಾವು ತಮ್ಮ ಪಕ್ಷದ ಬಗ್ಗೆ ಮಾತ್ರ ಯೋಚಿಸುವುದಾಗಿ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Feb 02, 2023 01:09 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.