MBP hits out at HDK; ನಮ್ಮ ಸರ್ಕಾರವಿನ್ನೂ ಸೆಟ್ಲ್ ಆಗಿಲ್ಲ, ಆಗಲೇ ಕುಮಾರಸ್ವಾಮಿಗೆ ಆರೋಪ ಮಾಡುವ ಆತುರ: ಎಂಬಿ ಪಾಟೀಲ್, ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Jun 29, 2023 | 4:16 PM

ಕುಮಾರಸ್ವಾಮಿಯವರು ಸತ್ಯಾಂಶವಿಲ್ಲದ ಆರೋಪಗಳನ್ನು ಮಾಡೋದು ಸರಿಯಲ್ಲ ಎಂದು ಸಚಿವ ಪಾಟೀಲ್ ಹೇಳಿದರು.

ಬೆಂಗಳೂರು: ವರ್ಗಾವಣೆ ದಂಧೆ ಶುರುವಾಗಿದೆ ಎಂದು ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮಾಡಿರುವ ಅರೋಪಕ್ಕೆ ಸಚಿವ ಎಂಬಿ ಪಾಟೀಲ್ (MB Patil) ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಪಾಟೀಲ್ ತಮ್ಮ ಸರ್ಕಾರ ಇನ್ನೂ ಸೆಟ್ಲ್ ಆಗೋದ್ರಲ್ಲಿದೆ, ಆದರೆ ಕುಮಾರಸ್ವಾಮಿಯವರಿಗೆ ಆಗಲೇ ಆತುರ ಎಂದರು. ಸರ್ಕಾರ ಇನ್ನೂ ಟೆಂಡರ್ ಗಳನ್ನು ಓಪನ್ ಮಾಡಿಲ್ಲ ಮತ್ತು ಯಾವ ಕಾಮಗಾರಿಗೂ ಹಣ ಬಿಡುಗಡೆ ಮಾಡಿಲ್ಲ, ನಿನ್ನೆ ನಡೆದ ಸಂಪುಟ ಸಭೆಯಲ್ಲಿ (cabinet meeting) ಮುಖ್ಯಮಂತ್ರಿ ಸಿದ್ದರಾಮಯ್ಯ ಟೆಂಡರ್ ಗಳನ್ನು ಪರಿಶೀಲಿಸುವಂತೆ ಹೇಳಿದ್ದಾರೆ ಮತ್ತು ಎಲ್ಲವೂ ಪಾರದರ್ಶಕವಾಗಿರಲಿ ಅಂತ ಸೂಚನೆ ಸಹ ನೀಡಿದ್ದಾರೆ ಎಂದು ಪಾಟೀಲ್ ಹೇಳಿದರು. ಯಾವುದೇ ಇಲಾಖೆಯಿಂದ ಇದುವರೆಗೆ ಟೆಂಡರ್ ಗನ್ನು ಕರೆದಿಲ್ಲ ಮತ್ತು ಹಣವನ್ನೂ ಬಿಡುಗಡೆ ಮಾಡಿಲ್ಲ, ಹಾಗಾಗಿ ಕುಮಾರಸ್ವಾಮಿಯವರು ಸತ್ಯಾಂಶವಿಲ್ಲದ ಆರೋಪಗಳನ್ನು ಮಾಡೋದು ಸರಿಯಲ್ಲ ಎಂದು ಸಚಿವ ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.