ಹೇಮಾವತಿ ಜಲಾಶಯದ ಪ್ರಾಕೃತಿಕ ಸೊಬಗಿನಲ್ಲಿ ಹರ್ಷದಿಂದ ಕುಣಿದಾಡಿದ ಯುವಕ ಯುವತಿಯರು

ಹೇಮಾವತಿ ಜಲಾಶಯದ ಪಕ್ಕ ಪ್ರಕೃತಿಯ ಸೊಬಗನ್ನು ಆಸ್ವಾದಿಸುತ್ತಿರುವ ಯುವಕ ಮತ್ತು ಯುವತಿಯರು ಹುಚ್ಚು ಸಾಹಸಗಳನ್ನು ಮಾಡುತ್ತಿಲ್ಲ. ಸುರಕ್ಷಿತವಾದ ಸ್ಥಳದಲ್ಲಿ ನಿಂತು ಎಂಜಾಯ್ ಮಾಡುತ್ತಿದ್ದಾರೆ. ಯುವತಿಯರನ್ನು ಇಂಪ್ರೆಸ್ ಮಾಡಲು ಸಾಮಾನ್ಯವಾಗಿ ಯುವಕರು ಇಂಥ ಸ್ಥಳಗಳಲ್ಲಿ ಪರಾಕ್ರಮ ಪ್ರದರ್ಶಿಸಲು ಪ್ರಯತ್ನಿಸುತ್ತಾರೆ. ಇಲ್ಲಿ ಅದ್ಯಾವುದೂ ನಡೆಯುತ್ತಿಲ್ಲ.

ಹೇಮಾವತಿ ಜಲಾಶಯದ ಪ್ರಾಕೃತಿಕ ಸೊಬಗಿನಲ್ಲಿ ಹರ್ಷದಿಂದ ಕುಣಿದಾಡಿದ ಯುವಕ ಯುವತಿಯರು
|

Updated on: Jul 24, 2024 | 5:40 PM

ಹಾಸನ: ಈ ಯುವಕ ಯುವತಿಯರ ಆನಂದಕ್ಕೆ ಪಾರವೇ ಇಲ್ಲ ಮಾರಾಯ್ರೇ. ಇವರೆಲ್ಲ ಕಾಲೇಜೊಂದಲ್ಲಿ ಪಿಯು ಓದುತ್ತಿರುವ ಮಕ್ಕಳಿರಬಹುದು ಅನಿಸುತ್ತೆ. ಒಬ್ಬ ಹುಡುಗ ಉತ್ತರ ಕರ್ನಾಟಕದವರು ಅಂತ ಹೇಳುವುದು ಕೇಳಿಸುತ್ತದೆ. ಇವರೆಲ್ಲ ಹಾಸನ ತಾಲೂಕಿನ ಗೊರೂರು ಬಳಿಯಿರುವ ಹೇಮಾವತಿ ಜಲಾಶಯ ನೋಡಲು ಕಾಲೇಜಿಂದ ಟ್ರಿಪ್ ಬಂದಿರುತ್ತಾರೆ. ಹಾಸನ ಜಿಲ್ಲೆಯಲ್ಲೂ ಸತತವಾಗಿ ಮಳೆಯಾಗುತ್ತಿರುವ ಸಂಗತಿಯನ್ನು ನಾವು ಹೇಳುತ್ತಲೇ ಇದ್ದೇವೆ. ಅಧಿಕ ಮಳೆಯ ಕಾರಣ ಹೇಮಾವತಿ ಜಲಾಶಯಕ್ಕೆ 23,363 ಕ್ಯೂಸೆಕ್ಸ್ ನೀರು ಹರಿದು ಬಂದಿದೆ. ಹಾಗಾಗಿ ಜಲಾಶಯದಿಂದ 22,000 ಕ್ಯೂಸೆಕ್ಸ್ ನೀರನ್ನು ಹೊರಕ್ಕೆ ಹರಿಬಿಡಲಾಗಿದೆ. ಜಲಾಶಯದಿಂದ ಹೊರ ಧುಮ್ಮುಕ್ಕುತ್ತಿರುವ ನೀರಿನ ರಭಸ ಮತ್ತು ಗಾಳಿಗೆ ತುಂತುರು ನೀರು ಅಕ್ಕಪಕ್ಕ ಸಿಡಿಯುತ್ತಿದ್ದು ಜಲಾಶಯದ ಪಕ್ಕದಲ್ಲಿ ಒಂದು ಸುಂದರ ಮತ್ತು ಮನಮೋಹಕ ದೃಶ್ಯವನ್ನು ಸೃಷ್ಟಿಸಿದೆ. ತಮ್ಮ ದೇಹಗಳನ್ನು ತುಂತುರು ಹನಿಗಳಿಗೆ ಒಡ್ಡುತ್ತಾ ಮೈಯೆಲ್ಲ ತೋಯಿಸಿಕೊಂಡಿರುವ ಯುವಕ ಮತ್ತು ಯುವತಿಯರು ಹಾಡುತ್ತಾ, ಕುಣಿಯುತ್ತಾ, ಚೀರಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Karnataka Dam Water Level: ಆಲಮಟ್ಟಿ ​ಭರ್ತಿಗೆ 1 ಅಡಿ ಬಾಕಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

Follow us
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ