Bengaluru:  ಡಾ ಕೆ ಸುಧಾಕರ್ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ

|

Updated on: May 16, 2023 | 1:40 PM

ಬೊಮ್ಮಾಯಿ ಸರ್ಕಾರದಲ್ಲಿ ಹೆವಿವೇಟ್ ಅನಿಸಿಕೊಂಡಿದ್ದ ಸುಧಾಕರ್ ಸೋಲಿನ ಆಘಾತದಿಂದ ಇನ್ನೂ ಚೇತರಿಸಿಕೊಂಡಿಲ್ಲ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಪರಚಿತನಾಗಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ (Pradeep Eshwar) ಅವರಿಂದ ಸುಮಾರು 10,000 ಕ್ಕಿಂತ ಅಧಿಕ ಮತಗಳಿಂದ ಸೋತ ಮಾಜಿ ಸಚಿವ ಡಾ ಕೆ ಸುಧಾಕರ್ (Dr K Sudhakar) ಅವರ ಮನೆಗೆ ಇಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭೇಟಿ ನೀಡಿದರು. ಬೊಮ್ಮಾಯಿ ಸರ್ಕಾರದಲ್ಲಿ ಹೆವಿವೇಟ್ ಅನಿಸಿಕೊಂಡಿದ್ದ ಮತ್ತು ಮುಖ್ಯಮಂತ್ರಿಗಳ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಸುಧಾಕರ್ ಸೋಲಿನ ಆಘಾತದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಅವರ ಬೆಂಗಳೂರು ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಬೊಮ್ಮಾಯಿ, ‘ಸುಧಾಕರ್ ಅವರಲ್ಲಿ ಧೈರ್ಯ ತುಂಬಲು ಬಂದಿದ್ದೆ, ಸೋಮಣ್ಣ ಅವರ ಮನೆಗೂ ಹೋಗುತ್ತಿರುವೆ, ಇವರೆಲ್ಲ ನಮ್ಮ ಜೊತೆ ಶ್ರಮವಹಿಸಿ ಕೆಲಸ ಮಾಡಿದ್ದರು’ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ