ಬರೋಬ್ಬರಿ 40 ಅಡಿ ಆಳದ ನೀರಿಲ್ಲದ ಬಾವಿಗೆ ಬಿದ್ದ ಎತ್ತು: ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ರಕ್ಷಣೆ

Updated on: Jun 02, 2023 | 7:35 PM

40 ಅಡಿ ಆಳದ ನೀರಿಲ್ಲದ ಬಾವಿಗೆ ಬಿದ್ದಿದ್ದ ಎತ್ತು ರಕ್ಷಣೆ ಮಾಡಿರುವಂತಹ ರೋಚಕ ಘಟನೆ ಒಂದು ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಂಬ್ರಾಯಿ ಬಳಿಯ ಸಾತಗೇರಿ ಗ್ರಾಮದಲ್ಲಿ ನೀರು ಅರಸಿ ಬಂದಾಗ ಆಕಸ್ಮಿಕವಾಗಿ ಎತ್ತು ಬಾವಿಗೆ ಬಿದ್ದಿದೆ.

ಕಾರವಾರ: 40 ಅಡಿ ಆಳದ ನೀರಿಲ್ಲದ ಬಾವಿಗೆ ಬಿದ್ದಿದ್ದ ಎತ್ತು (Ox) ರಕ್ಷಣೆ ಮಾಡಿರುವಂತಹ ರೋಚಕ ಘಟನೆ ಒಂದು ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಂಬ್ರಾಯಿ ಬಳಿಯ ಸಾತಗೇರಿ ಗ್ರಾಮದಲ್ಲಿ ನೀರು ಅರಸಿ ಬಂದಾಗ ಆಕಸ್ಮಿಕವಾಗಿ ಎತ್ತು ಬಾವಿಗೆ ಬಿದ್ದಿದೆ. ಅದರ ನರಳಾಟ ಕಂಡು ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಒಂದು ಗಂಟೆಗಳ ನಿರಂತರ ಕಾರ್ಯಚರಣೆ ಮೂಲಕ ಎತ್ತನ್ನು ರಕ್ಷಣೆ ಮಾಡಲಾಗಿದೆ. ಎತ್ತಿಗೆ ಸಣ್ಣಪುಟ್ಟ ಗಾಯ ಹಿನ್ನೆಲೆ ಪಶು ಆಸ್ಪತ್ರೆ ಸಿಬ್ಬಂದಿಯಿಂದ ಚಿಕಿತ್ಸೆ ನೀಡಲಾಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿಗಳ ರೋಚಕ ರಕ್ಷಣೆ ಕಾರ್ಯಚರಣೆ ವಿಡಿಯೋ ವೈರಲ್​ ಆಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More