ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು

Edited By: ವಿವೇಕ ಬಿರಾದಾರ

Updated on: Oct 11, 2024 | 1:05 PM

ಮನಷ್ಯರಿಗಿಂತ ಪ್ರಾಣಿಗಳಿಗೆ ನಿಯುತ್ತು ಜಾಸ್ತಿ ಎಂಬ ಮಾತು ಮತ್ತೆ ಇಲ್ಲಿ ಸಾಬೀತಾಗಿದೆ. ಮೊಸಳೆ ದಾಳಿಯಿಂದ ಯುವ ರೈತನನ್ನು ಎತ್ತು ಕಾಪಾಡಿದೆ. ಬಾಗಲಕೋಟೆ ‌ಜಿಲ್ಲೆ ಬೀಳಗಿ ತಾಲ್ಲೂಕಿನ ಹೊನ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಬಾಗಲಕೋಟೆ, ಅಕ್ಟೋಬರ್​ 11: ಮನಷ್ಯರಿಗಿಂತ ಪ್ರಾಣಿಗಳಿಗೆ ನಿಯುತ್ತು ಜಾಸ್ತಿ ಎಂಬ ಮಾತು ಮತ್ತೆ ಇಲ್ಲಿ ಸಾಬೀತಾಗಿದೆ. ಮೊಸಳೆ ದಾಳಿಯಿಂದ ಯುವ ರೈತನನ್ನು ಎತ್ತು ಕಾಪಾಡಿದೆ. ಬಾಗಲಕೋಟೆ (Bagalkot) ‌ಜಿಲ್ಲೆ ಬೀಳಗಿ (Bilagi) ತಾಲೂಕಿನ ಹೊನ್ಯಾಳ ಗ್ರಾಮದ ಧರಿಯಪ್ಪ ಮೇಟಿ (32) ಎತ್ತಿನ‌ ಮೈ ತೊಳೆಯಲು ಆಲಮಟ್ಟಿ ಜಲಾಶಯದ ಹಿನ್ನೀರು ಕೃಷ್ಣ ನದಿಗೆ ತೆರಳಿದ್ದರು. ಧರಿಯಪ್ಪ ಮೇಟಿ ಎತ್ತಿನ ಸಮೇತ ನದಿಗೆ ಇಳಿದಿದ್ದರು. ಈ ವೇಳೆ ಮೊಸಳೆ ದಾಳಿ ಮಾಡಿದ್ದು, ಧರಿಯಪ್ಪ ಮೇಟಿ ಅವರ ಬಲಗೈ ಹಿಡಿದಿದೆ.

ಮೊಸಳೆ‌ ದಾಳಿ ಮಾಡಿದ ಕೂಡಲೇ ಧರಿಯಪ್ಪ ಮೇಟಿ ಎಡಗೈಯಿಂದ ಎತ್ತಿನ ಹಗ್ಗ ಹಿಡಿದ್ದಾರೆ. ಕೂಡಲೆ ಎತ್ತು ಮಾಲೀಕನನ್ನು ಹೊತ್ತು ದಡಕ್ಕೆ ಕರೆ ತಂದಿದೆ. ದಡಕ್ಕೆ ಬರುತ್ತಿದ್ದಂತೆ ಮೊಸಳೆ ಧರಿಯಪ್ಪ ಮೇಟಿಯವರನ್ನು ಬಿಟ್ಟು ಓಡಿದೆ. ಆದರೆ, ಅಷ್ಟರ ಒಳಗಾಗಿ ಧರಿಯಪ್ಪ ಮೇಟಿ ಅವರ ಬಲಗೈ ಕಟ್​ ಆಗಿದೆ. ಎತ್ತು ಇಲ್ಲದಿದ್ದರೆ ಧರಿಯಪ್ಪ ಮೇಟಿ ಅವರ ಜೀವಕ್ಕೆ ಕುತ್ತು ಕಾದಿತ್ತು. ಈ ಮೂಲಕ ಎತ್ತು ಮಾಲೀಕನ ಜೀವ ಉಳಿಸಿದೆ.

ಇನ್ನು ಗಾಯಾಳು ಧರಿಯಪ್ಪ ಮೇಟಿ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀಳಗಿ ಶಾಸಕ ಜೆಟಿ ಪಾಟಿಲ್ ಗಾಯಾಳು ಧರಿಯಪ್ಪ ಮೇಟಿ ಆರೋಗ್ಯ ವಿಚಾರಿಸಿದ್ದಾರೆ. ಶಾಸಕ ಜೆಟಿ ಪಾಟಿಲ್ ಅರಣ್ಯಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ, ಧರಿಯಪ್ಪ ಮೇಟಿ ಅವರಿಗೆ ಸೂಕ್ತ ಪರಿಹಾರ ಕೊಡಬೇಕು. ಎಲ್ಲ ದಾಖಲೆಗಳನ್ನು ಕಲೆ ಹಾಕಿ ಪರಿಹಾರ ನೀಡಿ ಎಂದು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Oct 11, 2024 01:04 PM
Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More