My India My Life Goals: ಸಸಿ ನೆಡಲು ಹಣವಿಲ್ಲದಾದಾಗ ಕೋಟಿಮರವೀರ ಪದ್ಮಶ್ರೀ ರಾಮಯ್ಯ ತಮ್ಮ ಮೂರೆಕರೆ ಜಮೀನು ಮಾರಿಬಿಟ್ಟರು!

ಅವರ ಪರಿಸರ ಕಾಳಜಿ ಮತ್ತು ಪ್ರತಿದಿನ ಸಸಿ ನೆಡುವ ಕಾಯಕ ನೋಡಿದವರು ಹುಚ್ಚ ಅಂತ ಜರಿಯುತ್ತಿದ್ದರಂತೆ. ಆದರೆ ಜನರ ಕುಹುಕ, ವ್ಯಂಗ್ಯಕ್ಕೆ ಕ್ಯಾರೆ ಅನ್ನದ ಅವರು ಒಬ್ಬ ತಪಸ್ವೀಯಂತೆ ತಮ್ಮನ್ನು ಸಸಿ ನೆಡುವ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಾರೆ.

My India My Life Goals: ಸಸಿ ನೆಡಲು ಹಣವಿಲ್ಲದಾದಾಗ ಕೋಟಿಮರವೀರ ಪದ್ಮಶ್ರೀ ರಾಮಯ್ಯ ತಮ್ಮ ಮೂರೆಕರೆ ಜಮೀನು ಮಾರಿಬಿಟ್ಟರು!
|

Updated on: Aug 07, 2023 | 5:04 PM

ಬೆಂಗಳೂರು: ಪರಿಸರ ಮೇಲಿನ ಪ್ರೀತಿ ಮತ್ತು ಕಾಳಜಿಗೆ ಪದ್ಮಶ್ರೀ ದಾರಿಪಲ್ಲಿ ರಾಮಯ್ಯ (Daripalli Ramaiah) ಅವರಿಗಿಂತ ದೊಡ್ಡ ಉದಾಹರಣೆ ಮತ್ತೊಂದಿರಲಾರದು. 86ರ ಇಳಿವಯಸ್ಸಿನಲ್ಲೂ ಪ್ರತಿದಿನ ಸಸಿ ನೆಡಲು ತಮ್ಮ ಸ್ಕೂಟರ್ ಮೇಲೆ ಹೊರಬೀಳುವ ರಾಮಯ್ಯ ಇದುವರೆಗೆ ಒಂದು ಕೋಟಿಗೂ (more than a crore) ಹೆಚ್ಚು ಸಸಿ ನೆಟ್ಟು ಪೋಷಿಸಿದ್ದಾರೆಂದರೆ ಅವರ ವೃಕ್ಷಪ್ರೇಮ ಎಷ್ಟು ಅಗಾಧ ಅಂತ ಕಲ್ಪಿಸಿಕೊಳ್ಳಿ. ತೆಲಂಗಾಣದ ಖಮ್ಮಮ್ ಜಿಲ್ಲೆಯ ರೆಡ್ಡಿಪಲ್ಲಿಯಲ್ಲಿ ಜನಸಿರುವ ರಾಮಯ್ಯ ಅವರ ಪರಿಸರ ಕಾಳಜಿ ಮತ್ತು ಪ್ರತಿದಿನ ಸಸಿ ನೆಡುವ ಕಾಯಕ ನೋಡಿದವರು ಹುಚ್ಚ ಅಂತ ಜರಿಯುತ್ತಿದ್ದರಂತೆ. ಆದರೆ ಜನರ ಕುಹುಕ, ವ್ಯಂಗ್ಯಕ್ಕೆ ಕ್ಯಾರೆ ಅನ್ನದ ಅವರು ಒಬ್ಬ ತಪಸ್ವೀಯಂತೆ ತಮ್ಮನ್ನು ಸಸಿ ನೆಡುವ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಾರೆ. ಇವರ ಪರಿಸರ ಕಾಳಜಿಯನ್ನು ಗಮನಿಸಿದ ಕೇಂದ್ರ ಸರ್ಕಾರ 2017 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತು. ಅದೊಮ್ಮೆ ಇವರಲ್ಲಿ ಬೀಜ ಕೊಳ್ಳಲು ಹಣವಿಲ್ಲದ ಸ್ಥಿತಿ ಎದುರಾಯಿತಂತೆ. ಆಗ ಈ ಹಿರಿಜೀವಿ ತಮ್ಮ ಮೂರು ಎಕರೆ ಜಮೀನು ಮಾರಿ ಬೀಜ ಖರೀದಿಸಿದರಂತೆ! ಎಂಥ ನಿಸ್ವಾರ್ಥ ಮನೋಭಾವ ಎಂಥ ಪರಿಸರ ಪ್ರೇಮ! ಇವರು ಜೀವಿಸುವ ಗ್ರಹದಲ್ಲೇ ನಾವು ಜೀವಿಸುತ್ತಿರೋದು ನಮ್ಮ ಪುಣ್ಯವಲ್ಲದೆ ಮತ್ತೇನೂ ಅಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!