ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ!

Updated on: Apr 27, 2025 | 1:11 PM

ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ಪಾಕಿಸ್ತಾನ ಮೀಡಯಾಗಳು ಸುದ್ದಿ ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡ ವಿರೋಧ ಪಕ್ಷ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಇನ್ನು ಇದಕ್ಕೆ ಇದೀಗ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು, (ಏಪ್ರಿಲ್ 27): ಪಾಕಿಸ್ತಾನದ (Pakistan) ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ಪಾಕಿಸ್ತಾನ ಮೀಡಯಾಗಳು ಸುದ್ದಿ ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡ ವಿರೋಧ ಪಕ್ಷ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಇನ್ನು ಇದಕ್ಕೆ ಇದೀಗ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ. ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು. ಯುದ್ಧದಿಂದಲೇ ಪರಿಹಾರ ಅಲ್ಲ, ಯುದ್ಧವೇ ಬೇಡವೇ ಬೇಡ ಎಂದು ನಾನು ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More