ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ!

Updated on: Apr 27, 2025 | 1:11 PM

ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ಪಾಕಿಸ್ತಾನ ಮೀಡಯಾಗಳು ಸುದ್ದಿ ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡ ವಿರೋಧ ಪಕ್ಷ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಇನ್ನು ಇದಕ್ಕೆ ಇದೀಗ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು, (ಏಪ್ರಿಲ್ 27): ಪಾಕಿಸ್ತಾನದ (Pakistan) ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ಪಾಕಿಸ್ತಾನ ಮೀಡಯಾಗಳು ಸುದ್ದಿ ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡ ವಿರೋಧ ಪಕ್ಷ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಇನ್ನು ಇದಕ್ಕೆ ಇದೀಗ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ. ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು. ಯುದ್ಧದಿಂದಲೇ ಪರಿಹಾರ ಅಲ್ಲ, ಯುದ್ಧವೇ ಬೇಡವೇ ಬೇಡ ಎಂದು ನಾನು ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Loading...
Unable to load recommendations.
Follow Us