AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಮೃತ ಮಂಜುನಾಥ್ ಪುತ್ರ

ಅಮ್ಮ ನನ್ನ ಕರ್ಕೊಂಡು ಬರುತ್ತಿರುವಾಗ ಎಲ್ಲರೂ ಓಡೋಕೆ ಶುರುಮಾಡಿದ್ರು, ಆಗ ಅಲ್ಲಿ ಎಲ್ಲರಿಗೂ ಗೊತ್ತಾಗಿತ್ತು ಉಗ್ರರು ಫೈರಿಂಗ್ ಮಾಡುತ್ತಿದ್ದಾರೆ ಅಂತಾ. ನಾನು ಅಮ್ಮ ಓಡೋಕೆ ಶುರು ಮಾಡಿದ್ವಿ. ಅಪ್ಪ ಎಲ್ಲಿ ಅಂತಾ ಹಿಂದೆ ತಿರುಗಿ ನೋಡಿದ್ರೆ ಶೂಟ್ ಆಗಿ ಬಿದ್ದಿದ್ರು ಎಂದು ಹೇಳಿದರು. ಅಲ್ಲದೇ ಆ ವೇಳೆ ಸ್ಥಳೀಯ ಇಬ್ಬರು ಕಾಶ್ಮೀರಿಗಳು ನಮ್ಮನ್ನು ಕಾಪಾಡಿದರು ಎಂದರು.

ರಮೇಶ್ ಬಿ. ಜವಳಗೇರಾ
|

Updated on: Apr 24, 2025 | 3:30 PM

Share

ಶಿವಮೊಗ್ಗ, (ಏಪ್ರಿಲ್ 24): ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ವಿಡಿಯೋಗಳನ್ನು ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಈ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದು, ಇದರಲ್ಲಿ ಇಬ್ಬರು ಕನ್ನಡಿಗರು ಸೇರಿದ್ದಾರೆ. ಶಿವಮೊಗ್ಗದ ಮಂಜುನಾಥ್​ ರಾವ್ ಹಾಗೂ ಬೆಂಗಳೂರು ಭರತ್ ಭೂಷಣ್​​ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಇನ್ನು ತಂದೆ ಮಂಜುನಾಥ್​ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ರ, ಮೊದಲು ಏನೋ ಫೈರಿಂಗ್ ಮಾಡುತ್ತಿದ್ದ ಶಬ್ದ ಕೇಳಿಸಿತ್ತು. ನಾವು ಸೈನ್ಯದ ಟ್ರೈನಿಂಗ್‌ ನಡೆಯುತ್ತಿರಬೇಕು. ಇಲ್ಲಾ ಏನೋ ಪಟಾಕಿ ಹೊಡಿತಿದ್ದಾರೆ ಅಂತಾ ಅನ್ಕೊಂಡ್ವಿ. ನೋಡಿದ್ರೆ ಎಲ್ಲರೂ ಓಡೋಕೆ ಶುರು ಮಾಡಿದ್ರು. ನಾನು ದೂರದಲ್ಲಿ ಕೂತಿದ್ದೆ. ಅಪ್ಪ ಅಮ್ಮ ನಂಗೆ ಏನೋ ತರೋಕೆ ಹೋದ್ರು. ನನ್ನನ್ನು ಅಲ್ಲೇ ಕೂರೋಕೆ ಹೇಳಿ ಹೋದ್ರು. ಮತ್ತೇ ಅಪ್ಪ ಅಮ್ಮನ ಜೊತೆ ನನ್ನ ಕರ್ಕೊಂಡು ಬರೋಕೆ ಹೇಳಿದ್ರು. ಅಮ್ಮ ನನ್ನ ಕರ್ಕೊಂಡು ಬರುತ್ತಿರುವಾಗ ಎಲ್ಲರೂ ಓಡೋಕೆ ಶುರುಮಾಡಿದ್ರು, ಆಗ ಅಲ್ಲಿ ಎಲ್ಲರಿಗೂ ಗೊತ್ತಾಗಿತ್ತು ಉಗ್ರರು ಫೈರಿಂಗ್ ಮಾಡುತ್ತಿದ್ದಾರೆ ಅಂತಾ. ನಾನು ಅಮ್ಮ ಓಡೋಕೆ ಶುರು ಮಾಡಿದ್ವಿ. ಅಪ್ಪ ಎಲ್ಲಿ ಅಂತಾ ಹಿಂದೆ ತಿರುಗಿ ನೋಡಿದ್ರೆ ಶೂಟ್ ಆಗಿ ಬಿದ್ದಿದ್ರು ಎಂದು ಹೇಳಿದರು. ಅಲ್ಲದೇ ಆ ವೇಳೆ ಸ್ಥಳೀಯ ಇಬ್ಬರು ಕಾಶ್ಮೀರಿಗಳು ನಮ್ಮನ್ನು ಕಾಪಾಡಿದರು ಎಂದರು.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್