AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pahalgam Terror Attack: ಉಗ್ರರ ದಾಳಿ ಬೆನ್ನಲ್ಲೇ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

Pahalgam Terror Attack: ಉಗ್ರರ ದಾಳಿ ಬೆನ್ನಲ್ಲೇ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಸುಷ್ಮಾ ಚಕ್ರೆ
|

Updated on: Apr 22, 2025 | 8:46 PM

ಇಂದು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನ ಪ್ರಮುಖ ಪ್ರವಾಸಿ ತಾಣದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ, ಹಲವಾರು ಜನರನ್ನು ಕೊಂದಿದ್ದಾರೆ. ಈ ಘಟನೆಯಲ್ಲಿ ಕನಿಷ್ಠ 20 ಜನರು ಗಾಯಗೊಂಡಿದ್ದಾರೆ. ಪ್ರವಾಸಿಗರ ಮೇಲೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ಶ್ರೀನಗರಕ್ಕೆ ತೆರಳಿದ್ದಾರೆ. ಶ್ರೀನಗರಕ್ಕೆ ಬಂದಿಳಿದ ತಕ್ಷಣ ಶಾ ಉನ್ನತ ಮಟ್ಟದ ಭದ್ರತಾ ಪರಿಶೀಲನೆ ನಡೆಸಲಿದ್ದಾರೆ. ಗಾಯಾಳುಗಳನ್ನು ಭೇಟಿ ಮಾಡಲು ಅವರು ನಾಳೆ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯಿದೆ.

ನವದೆಹಲಿ, ಏಪ್ರಿಲ್ 22: ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ (Pahalgam Terror Attack) ಪ್ರವಾಸಕ್ಕೆಂದು ಬಂದಿದ್ದ ಜನರ ಮೇಲೆ ಇಂದು ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 25ಕ್ಕೂ ಹೆಚ್ಚು ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಸಾವಿನ ಸಂಖ್ಯೆ ಇನ್ನೂ ಖಚಿತವಾಗಿ ಲಭ್ಯವಾಗಿಲ್ಲ. ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಫೋನ್ ಮಾಡಿ ಮಾಹಿತಿ ಪಡೆದಿದ್ದರು. ಹಾಗೇ, ಆದಷ್ಟು ಬೇಗ ಕಾಶ್ಮೀರಕ್ಕೆ ತೆರಳಿ ಅಲ್ಲಿನ ಪರಿಸ್ಥಿತಿ ಅವಲೋಕಿಸುವಂತೆ ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ನೆರವಾಗುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಉನ್ನತ ಮಟ್ಟದ ಭದ್ರತಾ ಪರಿಶೀಲನೆ ನಡೆಸಲು ಸಚಿವ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಶ್ರೀನಗರಕ್ಕೆ ತೆರಳಿದ್ದಾರೆ.

ಪ್ರವಾಸಿಗರ ಮೇಲೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ಶ್ರೀನಗರಕ್ಕೆ ತೆರಳಿದ್ದಾರೆ. ಶ್ರೀನಗರಕ್ಕೆ ಬಂದಿಳಿದ ತಕ್ಷಣ ಶಾ ಉನ್ನತ ಮಟ್ಟದ ಭದ್ರತಾ ಪರಿಶೀಲನೆ ನಡೆಸಲಿದ್ದಾರೆ. ಗಾಯಾಳುಗಳನ್ನು ಭೇಟಿ ಮಾಡಲು ಅವರು ನಾಳೆ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ