ಪಹಲ್ಗಾಮ್ ಎನ್ನುವ ಸ್ವರ್ಗದಲ್ಲಿ ತೇಲಾಡುವಾಗ ಕಣ್ಣೆದುರೇ ಗಂಡನನ್ನ ಕೊಂದ ಉಗ್ರರ ಭೀಕರತೆ ಬಿಚ್ಚಿಟ್ಟ ಪತ್ನಿ

Updated on: Apr 24, 2025 | 5:35 PM

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಜೀವ ಕಳೆದುಕೊಂಡ ಶಿವಮೊಗ್ಗದ ಮಂಜುನಾಥ್ ರಾವ್​ ಪಂಚಭೂತಗಳಲ್ಲಿ ಲೀನರಾದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಂಜುನಾಥ್​ ರಾವ್ ಅವರ ಹೆಂಡತಿ ಪಲ್ಲವಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಭೀಕರತೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಶಿವಮೊಗ್ಗ, (ಏಪ್ರಿಲ್ 24): ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಜೀವ ಕಳೆದುಕೊಂಡ ಶಿವಮೊಗ್ಗದ ಮಂಜುನಾಥ್ ರಾವ್​ ಪಂಚಭೂತಗಳಲ್ಲಿ ಲೀನರಾದರು. ಶಿವಮೊಗ್ಗದ ತುಂಗಾ ನದಿ ತೀರದ ರೋಟರಿ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದ್ದು, ಮಂಜುನಾಥ್ ರಾವ್ ಚಿತೆಗೆ ಪುತ್ರ ಅಭಿಜೇಯ ಅಗ್ನಿ ಸ್ಪರ್ಶ ಮಾಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಂಜುನಾಥ್​ ರಾವ್ ಅವರ ಹೆಂಡತಿ ಪಲ್ಲವಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಭೀಕರತೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. ಉಗ್ರರ ಸ್ವರ್ಗದಲ್ಲಿ ತೇಲಾಡುತ್ತಿದ್ದ ಪ್ರವಾಸಿಗರ ಮೇಲೆ ಉಗ್ರರ ಅಟ್ಟಹಾಸ ಹೇಗಿತ್ತು ಎನ್ನುವುದನ್ನು ಬಿಚ್ಚಿಟ್ಟರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More