AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರುಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Apr 26, 2025 | 10:13 PM

Share

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯನ್ನು ಖಂಡಿಸಿ ಮೈಸೂರಿನಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳು ಪ್ರತಿಭಟನೆ ನಡೆಸಿದರು. ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಮೊಂಬತ್ತಿ ಮೆರವಣಿಗೆ ನಡೆಸಿ, ಶಾಂತಿಯುತ ಪ್ರತಿಭಟನೆ ಮಾಡಿದರು. ಮೃತರ ಆತ್ಮಕ್ಕೆ ಶಾಂತಿ ಕೋರಿದರು ಮತ್ತು ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಬೆಳಗಾವಿ, ಏಪ್ರಿಲ್​ 26: ಜಮ್ಮು-ಕಾಶ್ಮೀರದ (Jammu-Kashmir) ಪಹಲ್ಗಾಮ್​ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ (Pahalgam Terarist attack) ನಡೆಸಿದ್ದಾರೆ. ಇದನ್ನು ಖಂಡಿಸಿ ಮೈಸೂರಿನಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳು ಪ್ರತಿಭಟನೆ ನಡೆಸಿದರು. ಪಾಕಿಸ್ತಾನಕ್ಕೆ ಮುರ್ದಾಬಾದ್ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೊಂಬತ್ತಿ ಹಿಡಿದು ಮೈಸೂರಿನ ಮಿಲಾದ್ ಪಾರ್ಕ್ ಬಳಿಯಿಂದ ಶಾಂತಿ ಮೆರವಣಿಗೆ ನಡೆಸಿದರು. ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಪಾಕಿಸ್ಥಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ. ನಿಜಕ್ಕೂ ನಮಗೆ ನೋವಾಗಿದೆ ಆರು ದಿನ ಆಗಿತ್ತು ಮದುವೆಯಾಗಿ. ಆ ಹೆಣ್ಣು‌ ಮಗು ನೋಡಿ ದುಖಃವಾಗಿದೆ. ಉಗ್ರರನ್ನು ಹಿಡಿದು ನಮ್ಮ ಮುಂದೆ ಸಾಯಿಸಿ. ಆಗ ನಮಗೆ ಸಮಾಧಾನ ಆಗುತ್ತದೆ ಎಂದರು.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More