ಒಳ್ಳೆ ಮನುಷ್ಯ: ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು

Edited By:

Updated on: Dec 21, 2024 | 7:25 PM

ನೆಲಮಂಗಲ ತಾಲೂಕಿನ ತಾಳೇಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನರು ಮೃತಪಟ್ಟಿದ್ದಾರೆ. IAST ಸಾಫ್ಟ್‌ವೇರ್ ಕಂಪನಿ ಮಾಲೀಕ ಸೇರಿದಂತೆ ದುರ್ಮರಣ ಹೊಂದಿದ್ದಾರೆ. ಈ ದುರಂತದಿಂದ ಕಂಪನಿಯ ಸಿಬ್ಬಂದಿಗಳು ಆಘಾತಕ್ಕೊಳಗಾಗಿದ್ದಾರೆ. ತಮ್ಮ ಬಾಸ್​ ಬಗ್ಗೆ ಏನು ಹೇಳಿದ್ದಾರೆ ಕೇಳಿ.

ನೆಲಮಂಗಲ, ಡಿಸೆಂಬರ್​ 21: ಬೆಂಗಳೂರು ಗ್ರಾಮಾಮತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾಳೇಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, IAST ಸಾಫ್ಟ್‌ವೇರ್‌ ಕಂಪನಿ ಮಾಲೀಕ ಸೇರಿದಂತೆ 6 ಜನರು ದುರ್ಮರಣ ಹೊಂದಿದ್ದಾರೆ. ಸಾಫ್ಟ್‌ವೇರ್‌ ಕಂಪನಿ ಮಾಲೀಕನ ಸಾವಿನಿಂದ ಸದ್ಯ ಸಿಬ್ಬಂದಿಗಳು ಶಾಕ್​ ಆಗಿದ್ದಾರೆ. ಈ ಬಗ್ಗೆ ಸಿಬ್ಬಂದಿ ಚೇತನ್​ ಎಂಬುವವರು ಮಾತನಾಡಿದ್ದು, ನಮ್ಮ ಬಾಸ್​ ಒಳ್ಳೆ ಮನುಷ್ಯ. ಯಾರದ್ದೋ ತಪ್ಪಿಗೆ ಹೀಗಾಗಿರುವುದುಕ್ಕೆ ತುಂಬಾ ನೋವಾಗುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More