PAK vs ENG: ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್

PAK vs ENG: ನಸೀಮ್ ಶಾ ಎಸೆತದಲ್ಲಿ ಜೋ ರೂಟ್ ನೀಡಿದ ಸುಲಭ ಕ್ಯಾಚ್ ಅನ್ನು ಬಾಬರ್ ಕೈಚೆಲ್ಲಿದರು. ನಸೀಮ್ ಅವರ ಶಾರ್ಟ್ ಬಾಲ್‌ ಅನ್ನು ಜೋ ರೂಟ್ ಶಾರ್ಟ್ ಮಿಡ್ ವಿಕೆಟ್‌ ಕಡೆ ಆಡಿದರು. ಆದರೆ ಅಲ್ಲೇ ನಿಂತಿದ್ದ ಬಾಬರ್ ಆಝಂಗೆ ಸುಲಭ ಕ್ಯಾಚ್ ಹಿಡಿಯಲು ಸಾಧ್ಯವಾಗಲಿಲ್ಲ. ಬಾಬರ್ ಅವರ ಕಳಪೆ ಫೀಲ್ಡಿಂಗ್ ನೋಡಿ ನಸೀಮ್ ಶಾ ಕೂಡ ನಿರಾಸೆಗೊಂಡರು.

PAK vs ENG: ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
|

Updated on:Oct 10, 2024 | 4:18 PM

ಪಾಕಿಸ್ತಾನ ಹಾಗೂ ಇಂಗ್ಲೆಂಡ್‌ ನಡುವೆ ಮುಲ್ತಾನ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಬೌಲರ್​ಗಳು ಹೈರಾಣಾಗುವಂತೆ ಮಾಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಮೊದಲ ಇನ್ನಿಂಗ್ಸ್‌ನಲ್ಲಿ ಬರೋಬ್ಬರಿ 556 ರನ್‌ ದಾಖಲಿಸಿದರೆ, ಇತ್ತ ಇಂಗ್ಲೆಂಡ್ ಕೂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 823 ರನ್ ಬಾರಿಸಿದೆ. ಒಂದೆಡೆ ಪಾಕಿಸ್ತಾನದ ಮೂವರು ಬ್ಯಾಟ್ಸ್‌ಮನ್‌ಗಳು ಶತಕ ಸಿಡಿಸಿದರೆ, ಮತ್ತೊಂದೆಡೆ ಇಬ್ಬರು ಇಂಗ್ಲಿಷ್ ಬ್ಯಾಟ್ಸ್‌ಮನ್‌ಗಳಾದ ಜೋ ರೂಟ್ ದ್ವಿಶತಕ ಮತ್ತು ಹ್ಯಾರಿ ಬ್ರೂಕ್ ತ್ರಿಶತಕದ ಇನ್ನಿಂಗ್ಸ್ ಆಡಿದ್ದಾರೆ. ಇಂತಹ ಪಿಚ್​ನಲ್ಲಿ ವಿಕೆಟ್ ತೆಗೆಯಲು ಹೆಣಗಾಡುತ್ತಿರುವ ಬೌಲರ್​ಗೆ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿದರೆ ಹೇಗಾಗಬೇಡ ಹೇಳಿ. ಪಾಕ್ ತಂಡದ ಮಾಜಿ ನಾಯಕ ಬಾಬರ್ ಆಝಂ, ಜೋ ರೂಟ್ ನೀಡಿದ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿದ್ದಾರೆ. ಈ ಮೂಲಕ ರೂಟ್ ಅವರು ದ್ವಿಶತಕ ಸಿಡಿಸಲು ಬಾಬರ್ ನೆರವಾಗಿದ್ದಾರೆ.

ಸುಲಭ ಕ್ಯಾಚ್ ಕೈಬಿಟ್ಟ ಬಾಬರ್

ನಸೀಮ್ ಶಾ ಎಸೆತದಲ್ಲಿ ಜೋ ರೂಟ್ ನೀಡಿದ ಸುಲಭ ಕ್ಯಾಚ್ ಅನ್ನು ಬಾಬರ್ ಕೈಚೆಲ್ಲಿದರು. ನಸೀಮ್ ಅವರ ಶಾರ್ಟ್ ಬಾಲ್‌ ಅನ್ನು ಜೋ ರೂಟ್ ಶಾರ್ಟ್ ಮಿಡ್ ವಿಕೆಟ್‌ ಕಡೆ ಆಡಿದರು. ಆದರೆ ಅಲ್ಲೇ ನಿಂತಿದ್ದ ಬಾಬರ್ ಆಝಂಗೆ ಸುಲಭ ಕ್ಯಾಚ್ ಹಿಡಿಯಲು ಸಾಧ್ಯವಾಗಲಿಲ್ಲ. ಬಾಬರ್ ಅವರ ಕಳಪೆ ಫೀಲ್ಡಿಂಗ್ ನೋಡಿ ನಸೀಮ್ ಶಾ ಕೂಡ ನಿರಾಸೆಗೊಂಡರು. ಬಾಬರ್, ರೂಟ್ ಅವರ ಕ್ಯಾಚ್ ಕೈಬಿಟ್ಟಾಗ ಅವರು 186 ರನ್ ಗಳಿಸಿ ಆಡುತ್ತಿದ್ದರು. ಬಾಬರ್‌ ನೀಡಿದ ಈ ಜೀವದಾನವನ್ನು ಸದುಪಯೋಗಪಡಿಸಿಕೊಂಡ ರೂಟ್, ದ್ವಿಶತಕ ಸಿಡಿಸಿದ್ದಲ್ಲದೆ 262 ರನ್​ಗಳ ಇನ್ನಿಂಗ್ಸ್ ಆಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Thu, 10 October 24

Follow us
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್