Operation Sindoor: ಭಾರತ ಉಗ್ರರ ನೆಲೆಗಳ ದಾಳ ಮಾಡಿದರೆ ಪೂಂಚ್ ಭಾಗದಲ್ಲಿ ಪಾಕಿಸ್ತಾನ ಸೇನೆಯಿಂದ ನಾಗರಿಕ ನೆಲೆಗಳ ಮೇಲೆ ದಾಳಿ
ಭಾರತೀಯ ಸೇನೆ ನಿನ್ನೆ ರಾತ್ರಿ ಆಪರೇಷನ್ ಸಿಂಧೂರ ಅರಂಭಿಸಿ ಉಗ್ರರ ಒಂಬತ್ತು ತಾಣಗಳ ಮೇಲೆ ದಾಳಿ ನಡೆಸಿ ಅವರ ನೆಲೆಗಳನ್ನು ಧ್ವಂಸಗೊಳಿಸಿದೆ. ದಾಳಿಯಲ್ಲಿ ಎಷ್ಟು ಭಯೋತ್ಪಾದಕರು ಹತರಾಗಿದ್ದಾರೆ ಇನ್ನೂ ನಿಖರವಾಗಿ ಗೊತ್ತಾಗಿಲ್ಲ. ಭಾರತದ ದಾಳಿಯಿಂದ ಪಾಕಿಸ್ತಾನ ಕಂಗಾಲಾಗಿದೆ ಮತ್ತು ಇತರ ನೆರೆರಾಷ್ಟ್ರಗಳ ಕಡೆ ದೀನತೆಯಿಂದ ನೋಡುತ್ತಿದೆ, ಚೀನಾ ಸೇರಿದಂತೆ ಯಾವ ದೇಶವೂ ಅದರ ನೆರವಿಗೆ ಬರಲಾರದು.
ಪೂಂಚ್ (ಜಮ್ಮು ಮತ್ತು ಕಾಶ್ಮೀರ), ಮೇ 7: ಕೈಲಾಗದವನು ಮೈ ಪರಚಿಕೊಂಡಿದ್ದನಂತೆ, ಪಾಕಿಸ್ತಾನದ ಸೇನೆಗೆ ಈ ಮಾತು ಬಹಳ ಸೂಕ್ತವಾಗಿ ಅನ್ವಯಿಸುತ್ತದೆ. ಭಾರತೀಯ ಸೇನೆ ಉಗ್ರರು ಮತ್ತು ಅವರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದರೆ ಅದನ್ನು ಸಹಿಸಿಕೊಳ್ಳಲಾಗದ ಪಾಕಿಸ್ತಾನದ ಸೇನೆ (Pakistan army ) ಪೂಂಚ್ ಪ್ರದೇಶದಲ್ಲಿ ಜನ ವಾಸವಾಗಿರುವ ಪ್ರದೇಶಗಳು, ರಸ್ತೆಗಳ ಮೇಲೆ ದಾಳಿ ನಡೆಸಿದೆ. ಮನೆ ಮತ್ತು ಅಂಗಡಿಗಳಿಗೆ ಗುಂಡು ತಾಕಿರುವುದನ್ನು ದೃಶ್ಯಗಳಲ್ಲಿ ಗಮನಿಸಬಹುದು. ಪಾಕಿಸ್ತಾನಕ್ಕೆ ಇದನ್ನು ಮಾತ್ರ ಮಾಡಲು ಸಾಧ್ಯ. ಅಮಾಯಕ ಪ್ರವಾಸಿಗರು, ಮನೆಗಳಲ್ಲಿರುವ ನಿರಾಯಧ ನಾಗರಿಕರು ಮಾತ್ರ ಅದರ ಟಾರ್ಗೆಟ್! ಅದರ ಹೇಡಿತನದಿಂದ ಗಡಿಭಾಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಗೊಂಡಿದೆ.
ಇದನ್ನೂ ಓದಿ: Operation Sindoor: ಆಪರೇಷನ್ ಸಿಂಧೂರ್, ಪಿಒಕೆ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ

ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ

ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ

ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
