ತೀವ್ರಗೊಂಡ ಪಂಚಮಸಾಲಿ ಮೀಸಲಾತಿ ಹೋರಾಟ, ಲಾಠಿಚಾರ್ಜ್ ಹಿನ್ನೆಲೆ ಸಿದ್ದರಾಮಯ್ಯ ಕ್ಷಮೆ ಕೇಳಲು ಆಗ್ರಹ
ಬಸವ ಜಯ ಮೃತ್ಯುಂಜಯ ಸ್ವಾಮೀಜಿಯರು ಸಹ ಪ್ರತಿಭಟನೆಕಾರನ್ನು ಜೊತೆಗೂಡಿದಾಗ ನಮ್ಮ ಬೆಳಗಾವಿ ಪ್ರತಿನಿಧಿ ಅವರೊಂದಿಗೆ ಮಾತಾಡಿದರು. ಇವತ್ತು ರಾಜ್ಯದ ಎಲ್ಲ ಜಿಲ್ಲಾಕೇಂದ್ರ, ತಾಲೂಕು, ಹೋಬಳಿ ಮತ್ತು ಹಳ್ಳಿಗಳಲ್ಲಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ಮಾಡಿ ರಸ್ತೆಗಳನ್ನು ಬಂದ್ ಮಾಡುತ್ತಿದ್ದಾರೆ, ಸುಮಾರು 10 ಲಕ್ಷ ಜನ ಭಾಗಿಯಾಗಿದ್ದಾರೆ, ನಮ್ಮದು ಶಾಂತಿಯುತವಾದ ಪ್ರತಿಭಟನೆ ಎಂದು ಹೇಳಿದರು.
ಬೆಳಗಾವಿ: ಮಂಗಳವಾರದಂದು ಪಂಚಮಸಾಲಿ ಪ್ರತಿಭಟನೆಕಾರರ ಮೇಲೆ ನಡೆದ ಲಾಠಿ ಚಾರ್ಜ್ ಹಿನ್ನೆಲೆಯಲ್ಲಿ ಸಮುದಾಯದವರು ಹೋರಾಟವನ್ನು ತೀವ್ರಗೊಳಿಸಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನ ನಡೆಯುತ್ತಿರುವ ಬೆಳಗಾವಿಯಲ್ಲಿ ಅವರು ರಾಷ್ಟ್ರೀಯ ಹೆದ್ದಾರಿಯ ನಡುವೆ ಕೂತು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಕಾರರ ಪ್ರಮುಖ ಬೇಡಿಕೆಗಳೆಂದರೆ, ಲಾಠಿಚಾರ್ಜ್ಗೆ ಕಾರಣವಾದ ಪೊಲೀಸ್ ಅಧಿಕಾರಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು, ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚಮಸಾಲಿ ಲಿಂಗಾಯುತರ ಕ್ಷಮೆ ಕೇಳಬೇಕು ಮತ್ತು ಪಂಚಮಸಾಲಿ ಮೀಸಲಾತಿಯ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಡಿಸಬೇಕು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಪಂಚಮಸಾಲಿ ಹೋರಾಟ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್: ಆದೇಶ ಪಾಲನೆ ಸರಿಯಾದ ಕ್ರಮವೆಂದ ಸಿಎಂ ಸಿದ್ದರಾಮಯ್ಯ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
