ನ್ಯಾಯಾಧೀಶರು ಮತ್ತು ವೈದ್ಯ ತಂಡದ ಸಮಕ್ಷಮ ಆದಿಲ್ ದೇಹದ ಪಂಚನಾಮೆ ನಡೆಸಲಾಗುವುದು: ಉಮಾ ಪ್ರಶಾಂತ್, ಎಸ್ ಪಿ

ಅವರ ಸಾವಿನ ನಂತರ ಕುಟುಂಬಸ್ಥರು ಮತ್ತು ಸಮುದಾಯದ ಮುಖಂಡರು ಠಾಣೆಗೆ ಬಂದರು ಮತ್ತು ಅವರಿಗೆ ವಸ್ತುಸ್ಥಿತಿಯನ್ನು ವಿವರಿಸಿದ ಬಳಿಕ ಮನವರಿಕೆಯಾಗಿ ವಾಪಸ್ಸು ಹೋದರು ಎಂದರು. ಅದಾದ ಸ್ವಲ್ಪ ಹೊತ್ತಿನ ಬಳಿಕ ಉದ್ರಿಕ್ತ ಗುಂಪು ಪೊಲೀಸ್ ಠಾಣೆಗೆ ಬಂದು ದಾಂಧಲೆ ನಡೆಸಿತು. ಸಿಸಿಟಿವಿ ಫುಟೇಜ್ ಆಧಾರದ ಮೇಲೆ ಒಂದಷ್ಟು ಜನರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಎಸ್ ಪಿ ಹೇಳಿದರು.

ನ್ಯಾಯಾಧೀಶರು ಮತ್ತು ವೈದ್ಯ ತಂಡದ ಸಮಕ್ಷಮ ಆದಿಲ್ ದೇಹದ ಪಂಚನಾಮೆ ನಡೆಸಲಾಗುವುದು: ಉಮಾ ಪ್ರಶಾಂತ್, ಎಸ್ ಪಿ
|

Updated on: May 25, 2024 | 3:06 PM

ದಾವಣಗೆರೆ: ನಿನ್ನೆ ರಾತ್ರಿ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ (Channagiri police station) ಆದಿಲ್ (Adil) ಹೆಸರಿನ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ9 ಪ್ರತಿನಿಧಿಯೊಂದಿಎಗ ಮಾತಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ (Uma Prashanth, SP), ನಿನ್ನೆ ರಾತ್ರಿ ಸುಮಾರು 8.30 ಗಂಟೆಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಠಾಣೆಗೆ ಕರೆತರಲಾಗಿತ್ತು ಮತ್ತು ಅಲ್ಲಿಗೆ ಹೋದ ಕೇವಲ 6-7 ನಿಮಿಷಗಳ ನಂತರ ಆದಿಲ್ ಕುಸಿದುಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಬದುಕಲಿಲ್ಲ, ಸ್ಟೇಶನ್​ನಲ್ಲಿ ನಡೆದ ವಿದ್ಯಮಾನಗಳೆಲ್ಲ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಅವರ ಸಾವಿನ ನಂತರ ಕುಟುಂಬಸ್ಥರು ಮತ್ತು ಸಮುದಾಯದ ಮುಖಂಡರು ಠಾಣೆಗೆ ಬಂದರು ಮತ್ತು ಅವರಿಗೆ ವಸ್ತುಸ್ಥಿತಿಯನ್ನು ವಿವರಿಸಿದ ಬಳಿಕ ಮನವರಿಕೆಯಾಗಿ ವಾಪಸ್ಸು ಹೋದರು ಎಂದರು. ಅದಾದ ಸ್ವಲ್ಪ ಹೊತ್ತಿನ ಬಳಿಕ ಉದ್ರಿಕ್ತ ಗುಂಪು ಪೊಲೀಸ್ ಠಾಣೆಗೆ ಬಂದು ದಾಂಧಲೆ ನಡೆಸಿತು. ಸಿಸಿಟಿವಿ ಫುಟೇಜ್ ಆಧಾರದ ಮೇಲೆ ಒಂದಷ್ಟು ಜನರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಎಸ್ ಪಿ ಹೇಳಿದರು. ಮೃತ ಆದಿಲ್ ತಂದೆ ಕರೀಮುಲ್ಲಾ ಅಸಹಜ ಸಾವು ಅಂತ ದೂರು ದಾಖಲಿಸಿದ್ದಾರೆ. ನ್ಯಾಯಾಧೀಶರು ಮತ್ತು ವೈದ್ಯರ ಸಮಕ್ಷಮದಲ್ಲಿ ಶವದ ಪಂಚನಾಮೆ ನಡೆಸುವ ಪ್ರಕ್ರಿಯೆಯನ್ನು ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮಾಡಲಾಗುವುದು ಎಂದು ಉಮಾ ಪ್ರಶಾಂತ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು, ಠಾಣೆಗೆ ನುಗ್ಗಿ ವಸ್ತುಗಳನ್ನ ಧ್ವಂಸಗೊಳಿಸಿದ ಸಂಬಂಧಿಕರು

Follow us
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ